Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

editor tv by editor tv
July 20, 2025
in ವಿದೇಶ
0
ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು
1.9k
VIEWS
Share on FacebookShare on TwitterShare on Whatsapp

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

Previous Post

ನಮಗೆ ದೇಶ ಮುಖ್ಯ, ಪಾಕ್ ವಿರುದ್ಧ ಆಡಲ್ಲ ಎಂದ ಲೆಜೆಂಡ್ಸ್​.. ಪಂದ್ಯ ರದ್ದು ಮಾಡಿ ಕ್ಷಮೆ ಕೇಳಿದ WCL!

Next Post

Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

Next Post
Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.