Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

editor tv by editor tv
July 27, 2025
in ರಾಜ್ಯ
0
ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾದ ಸರಣಿ ಕೊಲೆಗಳ ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸುವುದರ ಜೊತೆಗೆ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸಲು ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಮ್ಮತದ ನಿರ್ಣಯ ತೆಗೆದುಕೊಂಡಿವೆ. ನ್ಯಾಯಾಂಗದ ಪ್ರಕ್ರಿಯೆಯನ್ನು ಗೌರವಿಸುತ್ತಲೇ, ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಗೆ ಬದ್ಧವಾಗಿರುವುದಾಗಿ ಅವರು ಘೋಷಿಸಿದ್ದಾರೆ.

ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್, ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿದಂತೆ ಒಟ್ಟು 8,842 ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಅವರು ಕೋರಿದ್ದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ನೇರ ಆರೋಪಗಳು ಇಲ್ಲದಿದ್ದರೂ, ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ಅವರ ಮುಖ್ಯ ವಾದವಾಗಿತ್ತು.

ಈ ವಾದವನ್ನು ಆಲಿಸಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿದ್ದರು. ಈ ಆದೇಶದ ಅನ್ವಯ, ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಅಥವಾ ಹಂಚದಂತೆ ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.

ಈ ಆದೇಶದ ಹಿನ್ನೆಲೆಯಲ್ಲಿ, ಬೆಂಗಳೂರಿನ ಈದಿನ ಡಾಟ್ ಕಾಮ್ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ಯೂಟ್ಯೂಬರ್‌ಗಳು ಮತ್ತು ಡಿಜಿಟಲ್ ಮಾಧ್ಯಮಗಳ ಪ್ರತಿನಿಧಿಗಳ ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ, ನ್ಯಾಯಾಲಯದ ಆದೇಶವನ್ನು ಪಾಲಿಸುವ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ಒಗ್ಗಟ್ಟಿನಿಂದ ಮುಂದುವರಿಸುವ ಬಗ್ಗೆ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳ ಜೊತೆಗೆ, “ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯಕ್ಕೆ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ” ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದರು. “ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ. ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲ ಎನ್ನುವುದನ್ನು ನಾವು ಅರಿತಿದ್ದೇವೆ. ಹೀಗಾಗಿ, ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ” ಎಂಬ ನಿರ್ಣಯವನ್ನು ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ತೆಗೆದುಕೊಂಡರು.

ಸಭೆಯಲ್ಲಿ ದ ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್, ಪೂಜಾ ಪ್ರಸನ್ನ, ಈ ದಿನ ಟಿವಿಯ ಡಾ. ಬಸವರಾಜು ಬಿ.ಸಿ, ಈದಿನ.ಕಾಮ್‌ ಸಂಪಾದಕರಾದ ಬಸವರಾಜು ಮೇಗಲಕೇರಿ, ವಾರ್ತಾಭಾರತಿಯ ಆಝಾದ್ ಕಂಡಿಗ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶುರಾಮ್, ಪ್ರತಿಧ್ವನಿಯ ಶಿವಕುಮಾರ್, ನ್ಯಾಷನಲ್ ಟಿವಿಯ ಮಂಜು ಬಣಗೆರೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಯೂಟ್ಯೂಬರ್‌ಗಳಾದ ಕಲಾ ಮಾಧ್ಯಮ ಪರಮೇಶ್ವರ್, ರಾ ಚಿಂತನ್, ಕುಡ್ಲ ರ‍್ಯಾಂಪೇಜ್‌ ಅಜಯ್‌ ಅಂಚನ್, ಪತ್ರಕರ್ತರಾದ ಕನ್ನಡ ಪ್ಲಾನೆಟ್ ದಿನೇಶ್ ಕುಮಾರ್ ದಿನೂ, V4 ನ್ಯೂಸ್‌ನ ಲಕ್ಷ್ಮಣ್ ಕುಂದರ್, ಪೀಪಲ್ ಮೀಡಿಯಾದ ಸುರಭಿ ರೇಣುಕಾಂಬಿಕೆ, ಪ್ರಸ್ತುತ ನ್ಯೂಸ್‌ನ ಬಶೀರ್ ಅಡ್ಯನಡ್ಕ, ಸನ್ಮಾರ್ಗ ನ್ಯೂಸ್‌ನ ಆರ್ ಎ ಲೋಹಾನಿ, ಆಶಾ ಮುಸ್ಸಂಜೆ ಸಮಯ, ಪೊಲೀಸ್ ವಾಣಿ ರಾಘವೇಂದ್ರಚಾರಿ, ದ ಪಾಲಿಟಿಕ್‌ನ ಸಿದ್ದಪ್ಪ ಮೂಲಗೆ, ಜನಶಕ್ತಿ ಮೀಡಿಯಾದ ಗುರುರಾಜ್ ದೇಸಾಯಿ, ತ್ರಿವರ್ಣ ನ್ಯೂಸ್ ಉಮರ್ ಫಾರೂಕ್, ಜಗದೀಶ್ ಕನ್ನಡ ಜಾಣ ಜಾಣೆಯರು, ಕನ್ನಡ ವನ್‌ನ ಭಾಗ್ಯನಾರಾಯಣ ಬೊಗ್ಗವರಪು, ಗೌರಿ ಮೀಡಿಯಾದ ಚಂದ್ರು ತರಹುಣಸೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ, ಡಾ. ವಾಸು ಎಚ್‌ ವಿ, ಹೇಮಾ ವೆಂಕಟ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Previous Post

ಹರಿದ್ವಾರದ ಮಾನಸ ದೇವಿ ದೇಗುಲದಲ್ಲಿ ಘೋರ ದುರಂತ; 6 ಭಕ್ತರು ಬಲಿ

Next Post

ಧರ್ಮಸ್ಥಳ ಶವ ಹೂತ ಪ್ರಕರಣ: ಅನಾಮಿಕ ದೂರುದಾರನ ವೈಯಕ್ತಿಕ ಮಾಹಿತಿ ಕೆದಕಿದ ಎಸ್ಐಟಿ!

Next Post
ಧರ್ಮಸ್ಥಳ ಶವ ಹೂತ ಪ್ರಕರಣ: ಅನಾಮಿಕ ದೂರುದಾರನ ವೈಯಕ್ತಿಕ ಮಾಹಿತಿ ಕೆದಕಿದ ಎಸ್ಐಟಿ!

ಧರ್ಮಸ್ಥಳ ಶವ ಹೂತ ಪ್ರಕರಣ: ಅನಾಮಿಕ ದೂರುದಾರನ ವೈಯಕ್ತಿಕ ಮಾಹಿತಿ ಕೆದಕಿದ ಎಸ್ಐಟಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.