Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

editor tv by editor tv
August 4, 2025
in ರಾಜ್ಯ
0
ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ
1.9k
VIEWS
Share on FacebookShare on TwitterShare on Whatsapp

 11ನೇ ಪಾಯಿಂಟ್‌ನ ಮೇಲ್ಭಾಗದ ಗುಡ್ಡದಲ್ಲಿ ಕಳೇಬರ ಪತ್ತೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟ ಶವಗಳ (Dharmasthala Mass Burials) ಜಾಡು ಬೆನ್ನತ್ತಿರುವ ಎಸ್‌ಐಟಿಗೆ (SIT) ಇಂದು ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ. 11ನೇ ಪಾಯಿಂಟ್‌ನ ಮೇಲ್ಭಾಗದ ಗುಡ್ಡದಲ್ಲಿ ಕಳೇಬರ ಪತ್ತೆಯಾಗಿದೆ. 5 ಅಡಿ ಆಳದಲ್ಲಿ ಅಸ್ಥಿಪಂಜರದ ಅವಶೇಷ ಸಿಕ್ಕಿದೆ.

ಅನಾಮಿಕ ದೂರುದಾರ ಗುರುತಿಸಿದ ಪಾಯಿಂಟ್ ನಂಬರ್ 11ರಲ್ಲಿ ಉತ್ಖನನಕ್ಕೆ ಎಸ್‌ಐಟಿ ಮುಂದಾಗಿದ್ದಾಗ ದೂರುದಾರ ಏಕಾಏಕಿ ಪಾಯಿಂಟ್ 11ರ ಸ್ಥಳ ಬದಲಾವಣೆ ಮಾಡಿಸಿದ್ದಾನೆ. ಈ ಜಾಗ ಅಲ್ಲ ಸ್ವಲ್ಪ ಮೇಲ್ಭಾಗಕ್ಕೆ ಬನ್ನಿ ಅಂತ ಗುಡ್ಡಕ್ಕೆ ಕರೆದೊಯ್ದು ಗುಂಡಿ ತೋಡಿಸಿದ್ದಾನೆ. ಈ ಗುಂಡಿಯಲ್ಲಿ ಅಸ್ಥಿಪಂಜರದ ಕುರುಹುಗಳು ಲಭ್ಯವಾಗಿರೋದಾಗಿ ಎಸ್‌ಐಟಿ ಮೂಲಗಳು ತಿಳಿಸಿವೆ. 

ವಿಶೇಷ ತನಿಖಾ ತಂಡ ಇಂದು ಪಾಯಿಂಟ್ 11 ರಲ್ಲಿ ಉತ್ಕನನ ನಡೆಸಬೇಕಿತ್ತು. ಆದರೆ ಈ ಜಾಗವನ್ನು ಅಗೆಯದೇ ದೂರುದಾರ ಎಸ್‌ಐಟಿ ತಂಡವನ್ನು ಮೇಲ್ಭಾಗಕ್ಕೆ ಕರೆದುಕೊಂಡು ಹೋಗಿದ್ದಾನೆ. 8, 9, 10, 11, 12 ಈ ಸ್ಥಳಗಳಲ್ಲಿ ಅತಿ ಹೆಚ್ಚು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರ ದೂರು ನೀಡಿದ್ದ. ಈ ದೂರಿನಂತೆ ಪಾಯಿಂಟ್ ನಂಬರ್ 8, 9, 10 ರಲ್ಲಿ ಸ್ಥಳ ಅಗೆದು ಎಸ್‌ಐಟಿ ತಂಡ ಉತ್ಕನನ ನಡೆಸಿತ್ತು. 

ಈ ಮೂರು ಜಾಗದಲ್ಲಿ 5 ರಿಂದ 6 ಅಡಿ ಅಗೆದರೂ ಯಾವುದೇ ಅಸ್ಥಿ ಪತ್ತೆಯಾಗಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಪಾಯಿಂಟ್ 11ರಿಂದ ಉತ್ಕನನ ನಡೆಯಬೇಕಿತ್ತು. ಪಾಯಿಂಟ್ ನಂಬರ್ 11,12 ರಲ್ಲಿ ಉತ್ಖನನಕ್ಕೆ ಎಸ್‌ಐಟಿ ಸಕಲ ಸಿದ್ದತೆ ಮಾಡಿತ್ತು. ಇಂದು ಬೆಳಗ್ಗೆ ದೂರುದಾರನನ್ನು ಪಾಯಿಂಟ್ 11ಕ್ಕೆ ಪೊಲೀಸರು ಕರೆ ತಂದಿದ್ದರು. ಆದರೆ ಇಲ್ಲಿ ಯಾವುದೇ ಉತ್ಕನನ ನಡೆಸದೇ ದೂರುದಾರ ಪಾಯಿಂಟ್ ನಂ 11 ಮೇಲಿರುವ ಗುಡ್ಡವನ್ನು ತೋರಿಸಿದ್ದಾನೆ. ಹೀಗಾಗಿ ಎಸ್‌ಐಟಿ ತಂಡ ಅನಾಮಿಕ ತೋರಿಸಿದ ಗುಡ್ಡವನ್ನು ಹತ್ತಿ ಪರಿಶೀಲನೆ ನಡೆಸಿದೆ. ದೂರುದಾರ ವ್ಯಕ್ತಿ ಹೊಸ ಜಾಗವನ್ನು ಪತ್ತೆ ಮಾಡಿರುವ ಸಾಧ್ಯತೆ ಇದ್ದು, ಕಾರ್ಮಿಕರು ಒಂದು ಮೂಟೆ ಉಪ್ಪು ತೆಗೆದುಕೊಂಡು ಹೋಗಿದ್ದಾರೆ. 

ಈ ಹಿಂದೆ ಪಾಯಿಂಟ್ 6ರಲ್ಲಿ ಮಾತ್ರ ಕಳೇಬರ ಸಿಕ್ಕಿದ್ದರೆ, ಪಾಯಿಂಟ್ 1ರಲ್ಲಿ ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್‌ಗಳು ಸಿಕ್ಕಿದ್ದವು. ಉತ್ಖನನ ಕಾರ್ಯದ ಸ್ಥಳದಲ್ಲಿ ಜನ ಜಮಾಯಿಸಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ಆಗ್ಲಿ, ಆದರೆ, ಪವಿತ್ರ ಕ್ಷೇತ್ರದ ಹೆಸರು ಕೆಡಿಸಬೇಡಿ ಅಂತ ಸ್ಥಳೀಯ ನಿವಾಸಿ ಆರಿಶ್ ಮೊಹಮ್ಮದ್ ಹೇಳಿದ್ದಾರೆ.

ಈ ಮಧ್ಯೆ ದೂರುದಾರನ ಪರ ವಕೀಲರು ಮತ್ತಷ್ಟು ಪಾಯಿಂಟ್ ಗುರುತಿಸಲು ಅವಕಾಶ ಕೊಡಿ ಎಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್‌ಗೆ ಒತ್ತಾಯ ಮಾಡಿದ್ದಾರೆ. ಆದರೆ, ವಕೀಲರ ಮನವಿಯನ್ನು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ತಿರಸ್ಕರಿಸಿದ್ದಾರೆ. ಸದ್ಯಕ್ಕೆ 13 ಸ್ಥಳಗಳಲ್ಲಿ ಮಾತ್ರ ಶೋಧಿಸುತ್ತೇವೆ. ಎಸ್‌ಐಟಿ ಸೂಚಿಸಿದಲ್ಲಿ ಮಾತ್ರ ನಾವು ಪರಿಶೀಲನೆ ಮಾಡುತ್ತೇವೆ ಎಂದು ಎಸಿ ಉತ್ತರ ನೀಡಿದ್ದಾರೆ. 

Previous Post

ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

Next Post

BREAKING: ಸಾರಿಗೆ ಮುಷ್ಕರ ಮುಂದೂಡಿಕೆ ಇಲ್ಲ.. ನಾಳೆಯಿಂದ ಬಸ್​ಗಳು ಬಂದ್

Next Post

BREAKING: ಸಾರಿಗೆ ಮುಷ್ಕರ ಮುಂದೂಡಿಕೆ ಇಲ್ಲ.. ನಾಳೆಯಿಂದ ಬಸ್​ಗಳು ಬಂದ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.