Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳದಲ್ಲಿ 15 ವರ್ಷದ ಬಾಲಕಿಯ ಶವ ಹೂತಿಟ್ಟ ಆರೋಪ: ಎಸ್ಐಟಿಗೆ ಬಂತು ಮತ್ತೊಂದು ದೂರು!

editor tv by editor tv
August 4, 2025
in ರಾಜ್ಯ
0
ಧರ್ಮಸ್ಥಳದಲ್ಲಿ 15 ವರ್ಷದ ಬಾಲಕಿಯ ಶವ ಹೂತಿಟ್ಟ ಆರೋಪ: ಎಸ್ಐಟಿಗೆ ಬಂತು ಮತ್ತೊಂದು ದೂರು!
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದಲ್ಲಿ 15 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಶವವನ್ನು ಹೂತಿಡಲಾಗಿದೆ ಎಂದು ಸಮಾಜ ಸೇವಕ ಜಯನ್ ಟಿ ಆರೋಪಿಸಿದ್ದಾರೆ. ಈ ಆರೋಪದ ಮೇರೆಗೆ ಎಸ್ಐಟಿ ಸೂಚನೆ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪ್ರಾಪ್ತ ಬಾಲಕಿಯ ಶವ ಹೂತು ಹಾಕಲಾಗಿದೆ ಎಂಬ ಭಾರೀ ಆರೋಪವನ್ನು ಸಮಾಜ ಸೇವಕ ಜಯನ್ ಟಿ ಅವರು ಮಾಡಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ಗೆ ದೂರು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಒಂದೊಂದೇ ಪ್ರಕರಣಗಳು ಮುನ್ನಲೆಗೆ ಬರುತ್ತಿರುವುದು ಹೆಚ್ಚಿನ ಸಂಚಲನಕ್ಕೆ ಕಾರಣವಾಗುತ್ತಿವೆ. ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಬಂದ ಜಯನ್ ಅವರಿಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಎಸ್ಐಟಿ ಸೂಚನೆ ನೀಡಿದೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿರುವುದರಿಂದ ಅಲ್ಲೇ  ಮೊದಲು ಕೇಸ್ ಕೊಡುವಂತೆ ಸೂಚನೆ ನೀಡಿದ ಹಿನ್ನೆಲೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 15 ವರ್ಷ ಹಿಂದೆ ಇದ್ದ ಠಾಣಾಧಿಕಾರಿಯ ಮೇಲೆ ಜಯನ್ ಆರೋಪ ಮಾಡಿದ್ದು, ಸುಮಾರು 15 ವರ್ಷದ ಬಾಲಕಿಯ ಶವ ನೋಡಿದ್ದೆ. ನಾನು ಕಣ್ಣಾರೆ ಕಂಡಿದ್ದೇನೆ ನನ್ನ ಜೊತೆ ಸಾಕ್ಷಿಗಳು ಇದ್ದಾರೆ. ತನಿಖೆಯ ವೇಳೆ ನಾನು ಅವರನ್ನು ಕರೆದುಕೊಂಡು ಬರುತ್ತೇನೆ ಎಂದಿದ್ದಾರೆ.

ಜಯನ್ ಟಿ ಸಲ್ಲಿಸಿದ ದೂರು ಅರ್ಜಿಯಲ್ಲಿ, ಇಡೀ ಘಟನೆಯ ವಿವರಗಳನ್ನು ನೀಡಲಾಗಿದೆ. 2002-03 ರ ಅವಧಿಯಲ್ಲಿ ರಾಜ್ಯ ಹೆದ್ದಾರಿ ಸಂಖ್ಯೆ 37ರ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 13ರಿಂದ 15 ವರ್ಷ ಪ್ರಾಯದ ಹೆಣ್ಣುಮಗುವಿನ ಶವವನ್ನು ಹೂತು ಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದರ ಹಿಂದೆ ನಿಲುಕಿರುವವರು ಒಬ್ಬ ಪೊಲೀಸ್ ಅಧಿಕಾರಿ ಎಂದು ಆರೋಪಿಸಿದ್ದಾರೆ.

ದೂರು ಪ್ರಕಾರ, ಒಂದು ವಾರದ ನಂತರ ಆ ಪೊಲೀಸರು ಸ್ಥಳಕ್ಕೆ ಬಂದು, ಅದು ಸುಮಾರು 35 ರಿಂದ 40 ವರ್ಷ ಪ್ರಾಯದ ಹೆಂಗಸು ಎಂಬಂತೆ ಸ್ಥಳೀಯರಿಗೆ ತಿಳಿಸಿದ್ದರು. ಶವವು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯದ್ದೆಂದು ಹೇಳಿ, ಜಿಗುಪ್ಸೆಯಿಂದ ಸಾವು ಕಂಡಿದ್ದಾಳೆ ಎಂಬ ರೂಪದಲ್ಲಿ ಘಟನೆಗೆ ಮುಚ್ಚಳಿಟ್ಟಿದ್ದಾರೆ. ಶವವನ್ನು ಕೇವಲ ಒಂದು ಅಥವಾ ಎರಡು ಫೀಟ್ ಆಳದ ಹೊಂಡದಲ್ಲಿ ಹೂತು ಹಾಕಲಾಗಿದೆ.

ಜಯನ್ ಟಿ ಅವರ ಗಂಭೀರ ಆರೋಪಗಳು ಹೀಗಿವೆ:

  • ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾದ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
  • ಘಟನೆ ಸಂಬಂಧ ಯಾವುದೇ ಎಫ್‌ಐಆರ್ ಅಥವಾ ಪ್ರಕರಣ ದಾಖಲಾಗಿಲ್ಲ.
  • ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮಹಜರು ನಡೆಸಿಲ್ಲ.
  • ಮರಣೋತ್ತರ ಪರೀಕ್ಷೆ ಕೂಡ ಮಾಡಿಲ್ಲ.
  • ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡಿಲ್ಲ.

ಜಯನ್ ಪ್ರತಿಕ್ರಿಯೆ:

ಧರ್ಮಸ್ಥಳದಲ್ಲಿ ಅಪ್ರಾಪ್ತ ಬಾಲಕಿಯ ಶವ ಹೂತು ಹಾಕಿದ ಪ್ರಕರಣ. ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ‌ ಸ್ವೀಕರಿಸಿ ಹಿಂಬರಹ ನೀಡಿ ಕಳುಹಿಸಿದ ಪೊಲೀಸರು. ಈ ಬಗ್ಗೆ ದೂರುದಾರ ಜಯಂತ್ ಸುವರ್ಣ ನ್ಯೂಸ್ ಗೆ ಪ್ರತಿಕ್ರಿಯೆ, ಈ ಘಟನೆಗೆ ನಾನೇ ಪ್ರತ್ಯಕ್ಷ ಸಾಕ್ಷಿ. ನನ್ನ ಜೊತೆ ನಾಲ್ಕೈದು ಮಂದಿ ಪ್ರತ್ಯಕ್ಷ ಸಾಕ್ಷಿ ಇದ್ದಾರೆ. ಗೌಪ್ಯತೆ ಕಾಪಾಡೋದಕ್ಕೆ ದೂರು ಅರ್ಜಿಯಲ್ಲಿ ಕೆಲ ಬದಲಾವಣೆ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಈಗಲೂ ‌ಆ ವ್ಯಕ್ತಿ ಬದುಕಿದ್ದಾರೆ. ಈ ದೂರಿನ ಬಗ್ಗೆ ಎಫ್ಐಆರ್ ದಾಖಲಿಸಿಕೊಳ್ಳಬೇಕು. ಸಂಪೂರ್ಣವಾಗಿ ತನಿಖೆ ಮಾಡಬೇಕು. ಎಫ್ಐಆರ್ ದಾಖಲು ಮಾಡದಿದ್ದರೆ ಎಸ್ಐಟಿ ಕಚೇರಿ ಮುಂದೆ ಧರಣಿ ಕೂರುತ್ತೇನೆ ಎಂದಿದ್ದಾರೆ.

ಎಸ್ಐಟಿ ಪ್ರತಿಕ್ರಿಯೆ:

ಈ ದೂರು ಪರಿಶೀಲಿಸಿದ ಎಸ್ಐಟಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಡಿಜಿಪಿ ಮತ್ತು ಐಜಿಪಿ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಇದು ಧರ್ಮಸ್ಥಳ ಶವ ಹೂತು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದ್ದು, ಮಕ್ಕಳ ಮೇಲಿನ ಅಪರಾಧಗಳ ಕುರಿತಂತೆ ಗಂಭೀರ ಕಾಳಜಿಗೆ ಕಾರಣವಾಗಿದೆ. ಈಗ ಎಲ್ಲಾ ಕಣ್ಣುಗಳು ಪೊಲೀಸ್ ಇಲಾಖೆ ಮತ್ತು ಎಸ್ಐಟಿಯ ಮುಂದಿನ ಕ್ರಮಗಳತ್ತ ನೆಟ್ಟಿರುತ್ತವೆ

Previous Post

BREAKING: ಸಾರಿಗೆ ಮುಷ್ಕರ ಮುಂದೂಡಿಕೆ ಇಲ್ಲ.. ನಾಳೆಯಿಂದ ಬಸ್​ಗಳು ಬಂದ್

Next Post

ಕಡಬ ಪಟ್ಟಣ ಪಂಚಾಯತ್ ಚುನಾವಣೆ :ನಾಮಪತ್ರ ಸಲ್ಲಿಸಿದ SDPI ಅಭ್ಯರ್ಥಿಗಳು

Next Post
ಕಡಬ ಪಟ್ಟಣ ಪಂಚಾಯತ್ ಚುನಾವಣೆ :ನಾಮಪತ್ರ ಸಲ್ಲಿಸಿದ SDPI ಅಭ್ಯರ್ಥಿಗಳು

ಕಡಬ ಪಟ್ಟಣ ಪಂಚಾಯತ್ ಚುನಾವಣೆ :ನಾಮಪತ್ರ ಸಲ್ಲಿಸಿದ SDPI ಅಭ್ಯರ್ಥಿಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.