Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸಂಬಂಧವೇ ಇಲ್ಲದ FB ಪುಟದಲ್ಲಿ ಪ್ರಸಾರಗೊಂಡ ಪೋಸ್ಟ್ ಗೆ ಎಸ್‌ಡಿಪಿಐ ಪುತ್ತೂರು ಅಸೆಂಬ್ಲಿ ಅಧ್ಯಕ್ಷರನ್ನು ತಳಕು ಹಾಕಿ ಪ್ರಕರಣ ದಾಖಲಿಸಿದ ಪೊಲೀಸರ ನಡೆ ಖಂಡನೀಯ : ಮೂನಿಶ್ ಅಲಿ

editor tv by editor tv
August 8, 2025
in ರಾಜ್ಯ
0
ಸಂಬಂಧವೇ ಇಲ್ಲದ FB ಪುಟದಲ್ಲಿ ಪ್ರಸಾರಗೊಂಡ ಪೋಸ್ಟ್ ಗೆ ಎಸ್‌ಡಿಪಿಐ ಪುತ್ತೂರು ಅಸೆಂಬ್ಲಿ ಅಧ್ಯಕ್ಷರನ್ನು ತಳಕು ಹಾಕಿ ಪ್ರಕರಣ ದಾಖಲಿಸಿದ ಪೊಲೀಸರ ನಡೆ ಖಂಡನೀಯ : ಮೂನಿಶ್ ಅಲಿ
1.9k
VIEWS
Share on FacebookShare on TwitterShare on Whatsapp

ಪುತ್ತೂರು: 2025ನೇ ಜುಲೈ ನಾಲ್ಕರಂದು ವ್ಯಕ್ತಿಯೊಬ್ಬ ತಲ್ವಾರ್ ಹಿಡಿದುಕೊಂಡು ಮಸೀದಿಗೆ ನುಗ್ಗಲು ಯತ್ನಿಸಿದ ಆಘಾತಕಾರಿ ಘಟನೆಯು ವ್ಯಾಪಕವಾಗಿ ವರದಿಯಾಗಿತ್ತು ಮತ್ತು ವೈರಲಾಗಿತ್ತು. ಈ ಹಿಂದೆ ಪುತ್ತೂರು ಸೇರಿದಂತೆ ಜಿಲ್ಲೆಯ ಹಲವು ಭಾಗದಲ್ಲಿ ಸಂಘಪರಿವಾರ ನಾಯಕರು ದ್ವೇಷ ಭಾಷಣವನ್ನು ಮಾಡಿದ್ದರು. ಅದರ ಜೊತೆ ಜೊತೆಗೆ ಪುತ್ತೂರಿನ ಬೊಳ್ವಾರಿನಲ್ಲಿ ಒಬ್ಬ ವ್ಯಕ್ತಿ ತಲ್ವಾರ್ ಹಿಡಿದುಕೊಂಡು ಮಸೀದಿಗೆ ನುಗ್ಗಲು ಯತ್ನಿಸಿದ ಘಟನೆಯು ನಡೆದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು X ನಲ್ಲಿ ಟ್ವೀಟ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಟ್ಯಾಗ್ ಮಾಡಿದ್ದರು. ಆದರೆ ಇದೀಗ ಒಂದು ತಿಂಗಳು ಕಳೆದ ಬಳಿಕ ಯಾವುದೋ ಸಂಬಂಧವೇ ಇಲ್ಲದ FB ಪೋಸ್ಟನ್ನು ಆರೋಪಿಸಿ ಅಶ್ರಫ್ ಮೇಲೆ ಪ್ರಕರಣ ದಾಖಲಿಸಿದ್ದು ಖಂಡನೀಯ’ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೂನಿಷ್ ಅಲಿ ಬಂಟ್ವಾಳ ಪತ್ರಿಕಾ ಪ್ರಟಕನೆಯಲ್ಲಿ ತಿಳಿಸಿದ್ದಾರೆ.

‘ನಾವು ಭಾರತೀಯ ಸೇನೆ’ ಎಂಬ ಫೇಸ್ ಬುಕ್ ಪುಟದ ಎಡ್ಮಿನ್ ಅವರು ಅವರದ್ದೇ ಕಂಟೆಂಟ್ ನೊಂದಿಗೆ ತಲ್ವಾರ್ ಹಿಡಿದುಕೊಂಡು ಹೋಗುವ ವೀಡಿಯೋವನ್ನು ಅಪ್‌ಲೋಡ್ ಮಾಡಿ ಅದಕ್ಕೆ ‘ಪುತ್ತೂರು: ಹಾಡಹಗಲೇ ತಲ್ವಾರ್ ಹಿಡಿದುಕೊಂಡು ಮಸೀದಿಗೆ ನುಗ್ಗಲು ಯತ್ನಿಸಿದ RSS ‌ನ ಭಯೋತ್ಪಾದಕ’ ಎಂದು ವೀಡಿಯೋದಲ್ಲೆ ಎಡಿಟ್ ಮಾಡಿ ಅವರೇ ಖುದ್ದು ಅವರ ಇಚ್ಛಾ ಶಕ್ತಿಯ ಕಂಟೆಂಟ್ ನಲ್ಲಿ ಹಾಕಿದರೆ ಅಶ್ರಫ್ ಬಾವು ರವರು ಹೇಗೆ ಜವಾಬ್ದಾರರಾಗುತ್ತಾರೆ’ ಎಂದು ಅವರು ಪ್ರಶ್ನಿಸಿದ್ದಾರೆ.

ಅದೇ ರೀತಿ ‘ಆ FB ಪೋಸ್ಟ್ ನಲ್ಲೂ ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತುವ ಪೋಸ್ಟ್ ಮಾಡಿರುವುದು ಕಂಡು ಬಂದಿಲ್ಲ, ಬದಲಾಗಿ RSS ನ್ನು ವಿರೋಧಿಸಿಕೊಂಡು ಪೋಸ್ಟ್ ಮಾಡಿರುವುದಾಗಿದೆ. RSS ಎಂಬುವುದು ಧರ್ಮವಲ್ಲ, ಅದೊಂದು ಭಾರತೀಯ ಕಾನೂನಿನಡಿಯಲ್ಲಿ ನೋಂದಣಿ ಆಗದ ಸಂಘಟನೆಯಷ್ಟೇ. ಹಾಗಾಗಿ ಇದು ಧರ್ಮ-ಧರ್ಮಗಳ ನಡುವೆ ದ್ವೇಷ ಬಿತ್ತಲು ಹೇಗೆ ಕಾರಣವಾಗುತ್ತದೆ ಎಂದು ಪೊಲೀಸ್ ಇಲಾಖೆ ಉತ್ತರಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಆ FB ಪೋಸ್ಟ್ ಗೂ, ಅಶ್ರಫ್ ಬಾವು ರವರಿಗೂ ಯಾವುದೇ ಸಂಬಂಧವಿಲ್ಲ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಟ್ಯಾಗ್ ಮಾಡಿ ತಲ್ವಾರ್ ಪ್ರದರ್ಶನ ಕುರಿತು X ನಲ್ಲಿ ಟ್ವೀಟ್ ಮಾಡಿ ಒಂದು ತಿಂಗಳ ಬಳಿಕ ಅದರ ಕಾವು ಕಡಿಮೆಯಾದ ನಂತರ ಕೇಸ್ ದಾಖಲಿಸಿ ಪೊಲೀಸರು ಯಾರನ್ನು ಮೆಚ್ಚಿಸಲು ಅಶ್ರಫ್ ಬಾವು ರವರನ್ನು ಗುರಿಪಡಿಸಿದ್ದೀರಿ? ಇದರ ಹಿಂದಿನ ಉದ್ದೇಶವೇನು?’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಲ್ಲದೇ ಆ ಪೇಜ್ ನ ಅಡ್ಮಿನ್ ಅಶ್ರಫ್ ಬಾವು ರವರು ಎಂಬುದಕ್ಕೆ ಪೋಲಿಸರ ಬಳಿ ಯಾವ ದಾಖಲೆ ಇದೆ ? ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೂನಿಷ್ ಅಲಿ ಬಂಟ್ವಾಳ ಪ್ರಶ್ನಿಸಿದ್ದಾರೆ. ಇದರ ವಿರುದ್ಧ ಪಕ್ಷ ಕಾನೂನಾತ್ಮಕ ಕ್ರಮ ಕೈಗೊಳ್ಳಲಿದೆ ಎಂದೂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ಹಲ್ಲೆ ಪ್ರಕರಣ, ಓರ್ವ ಆರೋಪಿ ಬಂಧನ

Next Post

ʼಡೆತ್‌ನೋಟ್‌ʼ ನೋಡಿ ಡೆತ್‌ನೋಟ್‌ ಬರೆದು 14ರ ಬಾಲಕ ಆತ್ಮಹತ್ಯೆ!

Next Post
ʼಡೆತ್‌ನೋಟ್‌ʼ ನೋಡಿ ಡೆತ್‌ನೋಟ್‌ ಬರೆದು 14ರ ಬಾಲಕ ಆತ್ಮಹತ್ಯೆ!

ʼಡೆತ್‌ನೋಟ್‌ʼ ನೋಡಿ ಡೆತ್‌ನೋಟ್‌ ಬರೆದು 14ರ ಬಾಲಕ ಆತ್ಮಹತ್ಯೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.