Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

editor tv by editor tv
September 29, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

ಬಜ್ಪೆ: ಯುವತಿಯೋರ್ವಳ ನಗ್ನ‌ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಹಾಗೂ ಮುಲ್ಕಿ- ಮೂಡುಬಿದಿರೆ ಶಾಸಕ ಅವರ‌ ಆಪ್ತ ಸಮಿತ್ ರಾಜ್ ಅಲಿಯಾಸ್ ಸಮಿತ್ ರಾಜ್ ಧರೆಗುಡ್ಡೆಯ ವಿರುದ್ಧ ಸೆ.27ರ ಶನಿವಾರ ಬಜ್ಪೆ‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದಲ್ಲದೆ, ನಿರಂತರ ಲೈಂಗಿಕ‌ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

2023ರಲ್ಲಿ ಸಂತ್ರಸ್ತೆಯ ಸಹೋದರನಿಗೆ ಬಜ್ಪೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ ಪರಿಸ್ಥಿತಿಯನ್ನು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊರ್ವ ಗಮನಿಸಿ ಮೂಡುಬಿದಿರೆ ಶಾಸಕರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಧರೆಗುಡ್ಡೆಯ ಸಮೀತ್ ರಾಜ್ ನ ಮೊಬೈಲ್ ನಂಬರ್‌ ಅನ್ನು ಕೊಟ್ಟು ಮಾತನಾಡಲು ಹೇಳಿದ್ದರು. ಅದರಂತೆ ಸಂತ್ರಸ್ತೆ ಆತನಿಗೆ ಫೋನ್ ಮಾಡಿ ಕಷ್ಟವನ್ನು ಹೇಳಿಕೊಂಡಿದ್ದಳು. ಬಳಿಕ ಮೂಡಬಿದ್ರೆ ಶಾಸಕರು ಆಸ್ಪತ್ರೆಗೆ ಬಂದು ಸಹಾಯ ಮಾಡಿದ್ದರು.

ಇದಾದ ಬಳಿಕ ಆರೋಪಿ ಸಮಿತ್ ರಾಜ್ ಪದೇ ಪದೇ ಸಂತ್ರಸ್ತೆಯ ಮೊಬೈಲ್ ಫೋನ್ ಗೆ ಕರೆ ಮಾಡಿ ಒಳ್ಳೆಯ ರೀತಿಯಲ್ಲಿ ಮಾತನಾಡಿ ನಂತರ ಯುವತಿಯನ್ನು ಪ್ರೀತಿ ಮಾಡುತ್ತಿದ್ದು, ಮದುವೆಯಾಗುವುದಾಗಿ ಹೇಳಿದ್ದ. ಇದರಿಂದ ಹೆದರಿದ ಯುವತಿ ಮನೆಯಲ್ಲಿ ಮಾತನಾಡುವಂತೆ ತಿಳಿಸಿದ್ದಳು. ಈ ಸಂಬಂಧ ಆರೋಪಿ ಸಮಿತ್ ರಾಜ್ ನೊಂದಿಗೆ ಮಾತನಾಡಿದ್ದ ಆಕೆಯ ತಾಯಿ ಸಣ್ಣ ವಯಸ್ಸಿಗೆ ಮದುವೆ ಮಾಡಿಸುವುದಿಲ್ಲ‌ ಎಂದು ಹೇಳಿದ್ದರು. ಇದಾದ ಬಳಿಕವೂ ಆರೋಪಿಯು ಯುವತಿಗೆ ನಿರಂತರ ಫೊನ್‌ ಕರೆಗಳನ್ನು ಮಾಡುತ್ತಿದ್ದು, ಕರೆ ಸ್ವೀಕರಿಸದಿದ್ದಾಗ ಕಾಲೇಜಿನ ಬಳಿ ಮತ್ತು ಮನೆ ಬಳಿ ಬರುವುದುದಾಗಿ ಬೆದರಿಸುತ್ತಿದ್ದ. ಹೀಗಾಗಿ ಆತನ ಒತ್ತಡಕ್ಕೆ ಮಣಿದು ಆತನೊಂದಿಗೆ ಇಷ್ಟ ಇಲ್ಲದಿದ್ದರೂ ಮಾತನಾಡುತ್ತಿದ್ದೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

2023ರ ಮಾರ್ಚ್ 23ರಂದು ಕಾಲೇಜು ಬಿಟ್ಟು ಮನೆಗೆ ಬರುತ್ತಿದ್ದ ವೇಳೆ‌ ಆರೋಪಿಯು ಕಾರಿನಲ್ಲಿ ಬಂದು ಆಕೆಯನ್ನು ಕರೆದೊಯ್ದು, ಬಜ್ಪೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ಬಲಾತ್ಕಾರವಾಗಿ ಬಟ್ಟೆ ಬಿಚ್ಚಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಜೋರಾಗಿ ಬೊಬ್ಬೆ ಹೊಡೆದಾಗ ಬಾಯಿಗೆ ಕೈ ಅಡ್ಡ ಇಟ್ಟು, ಈ ವಿಚಾರ ಯಾರಲ್ಲಾದರೂ ಹೇಳಿದರೆ ಮನೆಗೆ ಬಂದು ನನ್ನನ್ನು ಮತ್ತು ನನ್ನ ಮನೆಯವರನ್ನು ಕೊಲೆ‌ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಆ ಬಳಿಕ ಯುವತಿಯನ್ನು ಹಲವು ಬಾರಿ ಆತನೊಂದಿಗೆ , ಹೋಗಲು ಒಪ್ಪದೇ ಇದ್ದಾಗ ಆಶ್ಲೀಲ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮಾನ ಹರಾಜು ಹಾಕುವುದಾಗಿ ಬೆದರಿಸುತ್ತಿದ್ದ.‌ ಅಲ್ಲದೆ, ನಗ್ನ ಫೊಟೊಗಳನ್ನೂ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಕಾರಣ ಯುವತಿ ನಗ್ನ ಫೊಟೊಗಳನ್ನೂ ಕಳುಹಿಸಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಮಾಹಿತಿ ನೀಡಿದ್ದಾಳೆ.‌

ಆರೋಪಿ ಸಮಿತ್ ರಾಜ್ ನ ಕಿರುಕುಳ ಹೆಚ್ಚಾದಾಗ ಮೂಡುಬಿದಿರೆ ಶಾಸಕರಿಗೆ ಹೇಳುವುದಾಗಿ ಹೇಳಿದಾಗ, “ನಾನು ಪ್ರಭಾವಿ ವ್ಯಕ್ತಿಯಾಗಿದ್ದು, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮಟ್ಟದ ನಾಯಕನಾಗಿದ್ದೇನೆ ಮತ್ತು ಮೂಡಬಿದ್ರೆ ಶಾಸಕರ ಆಪ್ತನಿದ್ದೇನೆ. ಮೂಡುಬಿದಿರೆ ಶಾಸಕರು ನಾನು ಹೇಳಿದ ಹಾಗೆ ಕೇಳುತ್ತಾರೆ. ನಾನು ಹೇಳಿದರೆ ಅವರು ನನ್ನೊಂದಿಗೆ ಪೊಲೀಸ್ ಸ್ಟೇಷನ್ ಗೂ ಬರುತ್ತಾರೆ. ನನ್ನ ಹಿಂದೆ ಸಂಘಟನೆ ಇದೆ. ಯಾವ ಪೊಲೀಸರೂ ಏನೂ ಮಾಡಲು ಆಗುವುದಿಲ್ಲ” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, “ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾನೆ ಎಂದು ಆಕೆ‌ ದೂರಿನಲ್ಲಿ ತಿಳಿಸಿದ್ದಾಳೆ.‌ ಈ ಸಂಬಂಧ ಬಜ್ಪೆ ಪೊಲೀಸರು IPC 1860 (U/s-354(A),504,506)ರ ಅಡಿ ಪ್ರಕರಣ‌ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಇತ್ತೀಚೆಗೆ ಇದೇ ಸಮಿತ್ ರಾಜ್ ವಿರುದ್ಧ ದಾಖಲಾದ ಪ್ರಕರಣ ಸಂಬಂಧಿಸಿ ಆತನ ಮೊಬೈಲ್ ಚೆಕ್ ಮಾಡಿದಾಗ ನೂರಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದವು.

Previous Post

ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

Next Post

ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

Next Post

ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.