Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಶಾಲೆಯಲ್ಲಿ ಪೂಜೆ-ಶಾಖೆ ನಡೆಸುವಂತಿಲ್ಲ.’ 39 ಆರೆಸ್ಸೆಸ್‌ ಕಾರ್ಯಕರ್ತರ ಬಂಧಿಸಿದ ತಮಿಳುನಾಡು ಸರ್ಕಾರ!

    ಗಾಂಧಿಯನ್ನು ಹತ್ಯೆಗೈದ ಸಂಘಟನೆ ಶತಮಾನೋತ್ಸವ ಆಚರಿಸುತ್ತಿದೆ, ಇದು ದೇಶದ ಅತ್ಯಂತ ದೊಡ್ಡ ದುರಂತ: ಬಿಕೆ ಹರಿಪ್ರಸಾದ್

    ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

    ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರ ನಾಣ್ಯದ ಮೇಲಿದೆ..’ ಆರೆಸ್ಸೆಸ್‌ ಶತಮಾನೋತ್ಸವಕ್ಕೆ ವಿಶೇಷ ನಾಣ್ಯ ರಿಲೀಸ್‌ ಮಾಡಿದ ಮೋದಿ!

    Update Google Chrome: ಭಾರತದ ಗೂಗಲ್ ಕ್ರೋಮ್ ಬಳಕೆದಾರರಿಗೆ ವಾರ್ನಿಂಗ್, ತಕ್ಷಣ ಅಪ್‌ಡೇಟ್‌ಗೆ ಸೂಚನೆ

    ವಿಶ್ವದ ದೊಡ್ಡಣ್ಣ ಅಮೆರಿಕಾದ ಸರ್ಕಾರವೇ ಬಂದ್‌! ಸರ್ಕಾರದ ಖರ್ಚುಗಳೆಲ್ಲಾ ಸಂಪೂರ್ಣ ಬಂದ್‌!

    ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

    ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಶಾಲೆಯಲ್ಲಿ ಪೂಜೆ-ಶಾಖೆ ನಡೆಸುವಂತಿಲ್ಲ.’ 39 ಆರೆಸ್ಸೆಸ್‌ ಕಾರ್ಯಕರ್ತರ ಬಂಧಿಸಿದ ತಮಿಳುನಾಡು ಸರ್ಕಾರ!

    ಗಾಂಧಿಯನ್ನು ಹತ್ಯೆಗೈದ ಸಂಘಟನೆ ಶತಮಾನೋತ್ಸವ ಆಚರಿಸುತ್ತಿದೆ, ಇದು ದೇಶದ ಅತ್ಯಂತ ದೊಡ್ಡ ದುರಂತ: ಬಿಕೆ ಹರಿಪ್ರಸಾದ್

    ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

    ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರ ನಾಣ್ಯದ ಮೇಲಿದೆ..’ ಆರೆಸ್ಸೆಸ್‌ ಶತಮಾನೋತ್ಸವಕ್ಕೆ ವಿಶೇಷ ನಾಣ್ಯ ರಿಲೀಸ್‌ ಮಾಡಿದ ಮೋದಿ!

    Update Google Chrome: ಭಾರತದ ಗೂಗಲ್ ಕ್ರೋಮ್ ಬಳಕೆದಾರರಿಗೆ ವಾರ್ನಿಂಗ್, ತಕ್ಷಣ ಅಪ್‌ಡೇಟ್‌ಗೆ ಸೂಚನೆ

    ವಿಶ್ವದ ದೊಡ್ಡಣ್ಣ ಅಮೆರಿಕಾದ ಸರ್ಕಾರವೇ ಬಂದ್‌! ಸರ್ಕಾರದ ಖರ್ಚುಗಳೆಲ್ಲಾ ಸಂಪೂರ್ಣ ಬಂದ್‌!

    ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

    ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಗಾಂಧಿಯನ್ನು ಹತ್ಯೆಗೈದ ಸಂಘಟನೆ ಶತಮಾನೋತ್ಸವ ಆಚರಿಸುತ್ತಿದೆ, ಇದು ದೇಶದ ಅತ್ಯಂತ ದೊಡ್ಡ ದುರಂತ: ಬಿಕೆ ಹರಿಪ್ರಸಾದ್

editor tv by editor tv
October 2, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

M. Ashraf Kammaje..Published : Oct 02 2025, 01:18 PM IST

BK Hariprasad

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಗಾಂಧಿ ಜಯಂತಿಯಂದು ಆರ್‌ಎಸ್‌ಎಸ್ ಶತಮಾನೋತ್ಸವ ಆಚರಣೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗಾಂಧೀಜಿಯನ್ನು ಹತ್ಯೆ ಮಾಡಿದ ಸಂಘಟನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವುದು ದೇಶಕ್ಕೆ ಮಾಡಿದ ಅವಮಾನ ಎಂದು ಅವರು ಟೀಕಿಸಿದ್ದಾರೆ.  

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರನ್ನು ಹತ್ಯೆ ಮಾಡಿದ ಸಂಘಟನೆಯಾದ ಆರ್‌ಎಸ್‌ಎಸ್ (RSS) ಇಂದಿಗೆ 100 ವರ್ಷದ ಶತಮಾನೋತ್ಸವ ಆಚರಣೆ ಮಾಡುತ್ತಿರುವುದು ದೇಶದ ಇತಿಹಾಸಕ್ಕೆ ಕಳಂಕ ತಂದ ಘಟನೆ ಎಂದು ಅವರು ಟೀಕಿಸಿದರು. ಇಡೀ ಪ್ರಪಂಚವೇ ಗಾಂಧೀಜಿಯವರ ಜನ್ಮದಿನವನ್ನು ಆಚರಿಸುತ್ತಿದೆ. ವಿಶ್ವಸಂಸ್ಥೆಯೇ ಅಕ್ಟೋಬರ್ 2 ಅನ್ನು ಸತ್ಯ ಮತ್ತು ಅಹಿಂಸೆಯ ದಿನ ಎಂದು ಘೋಷಿಸಿದೆ. ಗಾಂಧೀಜಿ ಸತ್ಯ, ಶಾಂತಿ ಮತ್ತು ಸದ್ಭಾವನೆಯಿಂದ ಬದುಕಿದ ಮಹಾನ್ ವ್ಯಕ್ತಿ. ಇಂದಿನ ರಾಜಕೀಯದಲ್ಲಿ ನಡೆಯುತ್ತಿರುವ ಸುಳ್ಳು ಪ್ರಚಾರಗಳ ನಡುವೆ ಜನರಿಗೆ ಗಾಂಧೀಜಿಯವರ ಸತ್ಯದ ತತ್ತ್ವ ಇನ್ನಷ್ಟು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.

ಗಾಂಧೀಜಿ ಕೊಂದ ಸಂಘಟನೆ ಶತಮಾನೋತ್ಸವ ಆಚರಣೆ

ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಸಂಘಟನೆ ಇಂದು ತನ್ನ 100 ವರ್ಷದ ಶತಮಾನೋತ್ಸವ ಆಚರಿಸುತ್ತಿದೆ. ಇದು ದೇಶದ ಅತ್ಯಂತ ದೊಡ್ಡ ದುರಂತ. RSS ಕಾರ್ಯಕರ್ತ ನಾಥೂರಾಮ್ ಗೋಡ್ಸೆ ದೇಶದ ಮೊದಲ ಉಗ್ರವಾದಿ. ಸರ್ವೋದಯ, ಶಾಂತಿ ಮತ್ತು ಸದ್ಭಾವನೆಯ ವಿರುದ್ಧ ಪಾಠ ಮಾಡುವ ಸಂಘಟನೆಯು ಇಂತಹ ಕಾರ್ಯಕ್ರಮ ನಡೆಸುವುದು, ಅದಕ್ಕೆ ಪ್ರಧಾನ ಮಂತ್ರಿಯೇ ಹಾಜರಾಗಿರುವುದು ಸ್ವಾತಂತ್ರ ಭಾರತದ ಇತಿಹಾಸದಲ್ಲಿ ಕರಾಳ ದಿನ ಎಂದರು.

ಪಟೇಲ್ ಅವರೇ ನಿಷೇಧಿಸಿದ್ದ ಸಂಘಟನೆ

ಗಾಂಧೀಜಿ ಹತ್ಯೆಯಲ್ಲಿ RSS ನ ಪಾತ್ರದ ಹಿನ್ನೆಲೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ RSS ಅನ್ನು ನಿಷೇಧಿಸಿದ್ದರು. ಇಂತಹ ಸಂಘಟನೆಯ ಶತಮಾನೋತ್ಸವದಲ್ಲಿ ಪ್ರಧಾನ ಮಂತ್ರಿ ಭಾಗವಹಿಸಿರುವುದು ರಾಷ್ಟ್ರದ ಜನತೆಗೆ ಅವಮಾನ. RSS 62 ವರ್ಷಗಳ ಕಾಲ ತನ್ನ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹಾರಿಸಿರಲಿಲ್ಲ. ಇಂತಹ ಸಂಘಟನೆಯೊಂದಿಗೆ ನಿಂತಿರುವುದು ಪ್ರಧಾನ ಮಂತ್ರಿಗೆ ಶೋಭೆ ತರುವ ಕೆಲಸವಲ್ಲ ಎಂದು ಹರಿಪ್ರಸಾದ್ ಟೀಕಿಸಿದರು

ಸಾವರ್ಕರ್ ಮತ್ತು ಬ್ರಿಟಿಷರ ಪಾತ್ರದ ಬಗ್ಗೆ ಆರೋಪ

RSS ಹಾಗೂ ಸಾವರ್ಕರ್ ಬಗ್ಗೆ ಹರಿಪ್ರಸಾದ್ ತೀವ್ರ ಕಿಡಿಕಾರಿದರು, “ಸ್ವಾತಂತ್ರ ಹೋರಾಟದ ಸಮಯದಲ್ಲಿ RSS ಬ್ರಿಟಿಷರ ಪರ ನಿಂತು ಬೂಟು ಕಾಲುನೆಕ್ಕುತ್ತಿತ್ತು. ಸಾವರ್ಕರ್ ಅವರು ಬ್ರಿಟಿಷರಿಂದ ಪೆನ್ಷನ್ ಪಡೆದರು. 1942ರ ಕ್ವಿಟ್ ಇಂಡಿಯಾ ಚಳುವಳಿಗೆ ವಿರೋಧ ವ್ಯಕ್ತಪಡಿಸಿದವರು ಇವರೇ. ಇಂತಹ ಸಂಘಟನೆಯ ಪರವಾಗಿ ಸ್ಮಾರಕ ನೋಟು-ಕಾಯಿನ್ ಹೊರಡಿಸುತ್ತಿರುವುದು ಲಕ್ಷಾಂತರ ಸ್ವಾತಂತ್ರ ಹೋರಾಟಗಾರರ ತ್ಯಾಗಕ್ಕೆ ಅವಮಾನ” ಎಂದು ಹೇಳಿದರು.

ಪ್ರಧಾನ ಮಂತ್ರಿ ಕ್ಷಮೆಯಾಚಿಸಬೇಕು

RSS ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನತೆಗೆ ಕ್ಷಮೆಯಾಚಿಸಬೇಕು. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ, ದ್ವೇಷ ಮತ್ತು ಭೇದಭಾವ ಸೃಷ್ಟಿಸುವ ಸಂಘಟನೆ ಇದು. ಇಂತಹವರ ಪರವಾಗಿ ನಿಲ್ಲುವುದು ಸಂವಿಧಾನದ ಗೌರವವನ್ನು ಕುಗ್ಗಿಸುವಂತದ್ದು ಎಂದು ತೀವ್ರವಾಗಿ ಹೇಳಿದರು.

RSS ವಿರುದ್ಧ ಹೋರಾಟದ ಕರೆ

“RSS ಸಂಘಟನೆ ಶಸ್ತ್ರಾಸ್ತ್ರಗಳನ್ನು ಹಿಡಿದು ಅನೇಕ ದಂಗೆ, ಕೊಲೆಗಳನ್ನು ಸೃಷ್ಟಿಸಿದೆ. ದೇಶದಲ್ಲಿ ಹಿಂಸೆಯನ್ನು ಬೀಜ ಬಿತ್ತಿದವರ ವಿರುದ್ಧವೇ ಜನರು ಶಸ್ತ್ರಾಸ್ತ್ರ ಹಿಡಿಯಬೇಕಾಗಿದೆ. ಇಂತಹ ಚಟುವಟಿಕೆಗಳ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಕೇಸು ಬುಕ್ ಮಾಡಬೇಕು” ಎಂದು ಹರಿಪ್ರಸಾದ್ ಕಿಡಿಕಾರಿದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಗಾಂಧೀಜಿ ಆದರ್ಶಗಳನ್ನು ಜನರಿಗೆ ತಲುಪಿಸಬೇಕು. ಸರಳ ಜೀವನ – ಉನ್ನತ ಚಿಂತನೆ, ಸರ್ವಧರ್ಮ ಸಮಭಾವ ಹಾಗೂ ಶಾಂತಿ-ಸದ್ಭಾವನೆ ತತ್ವಗಳನ್ನು ಹೆಚ್ಚು ಪ್ರಚಾರ ಮಾಡಬೇಕು” ಎಂದು ಕರೆ ನೀಡಿದರು. ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ಸಿಗುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, “ಅನಿಸಿಕೆಗಳೇ ಸಾಕಷ್ಟು ಇವೆ. ಬಿರಿಯಾನಿ ತಿನ್ನಬೇಕೆಂದಿದ್ದರೂ ಸದ್ಯಕ್ಕೆ ಚಿತ್ರಾನ್ನ ತಿಂದರೂ ಸಾಕು” ಎಂದು ವ್ಯಂಗ್ಯವಾಡಿದರು.

Previous Post

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

Next Post

ಶಾಲೆಯಲ್ಲಿ ಪೂಜೆ-ಶಾಖೆ ನಡೆಸುವಂತಿಲ್ಲ.’ 39 ಆರೆಸ್ಸೆಸ್‌ ಕಾರ್ಯಕರ್ತರ ಬಂಧಿಸಿದ ತಮಿಳುನಾಡು ಸರ್ಕಾರ!

Next Post

ಶಾಲೆಯಲ್ಲಿ ಪೂಜೆ-ಶಾಖೆ ನಡೆಸುವಂತಿಲ್ಲ.' 39 ಆರೆಸ್ಸೆಸ್‌ ಕಾರ್ಯಕರ್ತರ ಬಂಧಿಸಿದ ತಮಿಳುನಾಡು ಸರ್ಕಾರ!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.