Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ಮನುವಾದಿಗಳ ಜಾತಿ ಅಸಮಾನತೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

editor tv by editor tv
October 7, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಅವರು, ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್‌ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Previous Post

ಸೆಂಟ್ ಸ್ಪ್ರೇ ಮಾಡಿ ಹಸುವಿಗೆ ಬೆಂಕಿ ಹಚ್ಚಿದ ಆರೋಪ: ಅಪ್ರಾಪ್ತನ ಮೇಲೆ ಹಲ್ಲೆ,ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ಭಾರೀ ವೈರಲ್, ನೈತಿಕ ಪೊಲೀಸ್ ಗಿರಿಯ ಆರೋಪ

Next Post

ಪಶ್ಚಾತ್ತಾಪ ಖಂಡಿತಾ ಇಲ್ಲ, ಶೂ ಎಸೆದು ಸರಿಯಾದ ಕೆಲಸ ಮಾಡಿದ್ದೇನೆ ಎಂದ ಹಿರಿಯ ವಕೀಲ ರಾಕೇಶ್‌ ಕಿಶೋರ್‌!

Next Post

ಪಶ್ಚಾತ್ತಾಪ ಖಂಡಿತಾ ಇಲ್ಲ, ಶೂ ಎಸೆದು ಸರಿಯಾದ ಕೆಲಸ ಮಾಡಿದ್ದೇನೆ ಎಂದ ಹಿರಿಯ ವಕೀಲ ರಾಕೇಶ್‌ ಕಿಶೋರ್‌!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.