Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

editor tv by editor tv
October 9, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Afghanistan Taliban Foreign Minister Mawlawi Amir Khan Muttaqi has arrived in New Delhi

– ಅಫ್ಘಾನ್‌ನಲ್ಲಿ ತಾಲಿಬಾನ್‌ ಅಧಿಕಾರಕ್ಕೆ ಏರಿದ ಬಳಿಕ ಮೊದಲ ಭೇಟಿ

ನವದೆಹಲಿ: ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ (Amir Khan Muttaqi)  ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ (Afghanistan) ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16 ರ ನಡುವೆ ಭಾರತಕ್ಕೆ (India) ಭೇಟಿ ನೀಡಲು ಅವಕಾಶ ನೀಡಿದೆ.

2021ರ ಆಗಸ್ಟ್‌ನಲ್ಲಿ ತಾಲಿಬಾನ್ (Taliban) ಅಧಿಕಾರ ವಶಪಡಿಸಿಕೊಂಡ ನಂತರ ಮೊದಲ ಉನ್ನತ ಮಟ್ಟದ ಸಭೆ ನಡೆಯಲಿರುವ ಕಾರಣ ಭಾರತ-ಅಫ್ಘಾನ್‌ ಸಂಬಂಧದ ಹೊಸ ಅಧ್ಯಾಯ ತೆರೆಯಲಿದೆ.

ಜೂನ್‌ 2022 ರಲ್ಲಿ ಹಿರಿಯ ರಾಜತಾಂತ್ರಿಕ ಜೆಪಿ ಸಿಂಗ್ ನೇತೃತ್ವದ ತಂಡ ಕಾಬೂಲ್‌ನಲ್ಲಿ ಅಮೀರ್‌ ಖಾನ್‌ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಇದು ಭಾರತದ ಮೊದಲ ಭೇಟಿಯಾಗಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಹಿರಿಯ ಐಎಫ್‌ಎಸ್ ಅಧಿಕಾರಿ ಜೆ.ಪಿ. ಸಿಂಗ್ ಸೇರಿದಂತೆ ಭಾರತೀಯ ಅಧಿಕಾರಿಗಳು ಮುತ್ತಕಿ ಮತ್ತು ಇತರ ತಾಲಿಬಾನ್ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆಗಾಗ ದುಬೈನಂತಹ ತಟಸ್ಥ ಸ್ಥಳಗಳಲ್ಲಿ ಭೇಟಿಯಾಗುತ್ತಿದ್ದರು.

ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ದುಬೈನಲ್ಲಿ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಭಾರತವು ಅಫ್ಘಾನಿಸ್ತಾನಕ್ಕೆ ನೀಡುತ್ತಿರುವ ಮಾನವೀಯ ನೆರವು, ವಿಶೇಷವಾಗಿ ಆರೋಗ್ಯ ವಲಯವನ್ನು ಬಲಪಡಿಸುವುದು ಮತ್ತು ನಿರಾಶ್ರಿತರ ಪುನರ್ವಸತಿಯನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ಕೋವಿಡ್‌ ಸಮಯದಲ್ಲಿ ಭಾರತ ಉಚಿತವಾಗಿ ಲಸಿಕೆಯನ್ನು ನೀಡಿತ್ತು. ಈಗಲೂ ಭಾರತ ಅಫ್ಘಾನಿಸ್ತಾನಕ್ಕೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ.

ಭಾರತವು ಪಾಕಿಸ್ತಾನದ ವಿರುದ್ಧ ಯಶಸ್ವಿಯಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಇದು 2021 ರ ನಂತರದ ಮೊದಲ ಸಚಿವ ಮಟ್ಟದ ಸಂಪರ್ಕವಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತಾಲಿಬಾನ್ ಖಂಡಿಸಿದ್ದಕ್ಕಾಗಿ ಜೈಶಂಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತ ಮತ್ತು ಅಫ್ಘಾನ್ ಜನರೊಂದಿಗಿನ ಸಾಂಪ್ರದಾಯಿಕ ಸ್ನೇಹವನ್ನು ಪುನರುಚ್ಚರಿಸಿದರು.

Previous Post

ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

Next Post

ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

Next Post

ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.