Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

editor tv by editor tv
October 9, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ ವರದಿ

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

Previous Post

ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

Next Post

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Next Post

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.