Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    ಮೈಸೂರು ದಸರಾದಲ್ಲಿ ಬಲೂನು ಮಾರಲು ಬಂದ 9 ವರ್ಷ ಬಾಲಕಿಯನ್ನು ಅತ್ಯಾ*ಚಾರವೆಸಗಿ, ಕೊಲೆಗೈದ ಆರೋಪಿ ಅರೆಸ್ಟ್!

    ಮೈಸೂರಿನಲ್ಲಿ ಬಾಲಕಿ ಅತ್ಯಾ*ರ ಕೊಲೆ ಪ್ರಕರಣ, ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    ಮೈಸೂರು ದಸರಾದಲ್ಲಿ ಬಲೂನು ಮಾರಲು ಬಂದ 9 ವರ್ಷ ಬಾಲಕಿಯನ್ನು ಅತ್ಯಾ*ಚಾರವೆಸಗಿ, ಕೊಲೆಗೈದ ಆರೋಪಿ ಅರೆಸ್ಟ್!

    ಮೈಸೂರಿನಲ್ಲಿ ಬಾಲಕಿ ಅತ್ಯಾ*ರ ಕೊಲೆ ಪ್ರಕರಣ, ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

editor tv by editor tv
October 11, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ತಾಲಿಬಾನ್(Taliban) ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಖಿ, ಭಾರತವನ್ನು ಅಫ್ಘಾನಿಸ್ತಾನದಂತೆ ನಡೆಸಿಕೊಂಡಿದ್ದಾರೆ. ಅವರು ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಪಾಲ್ಗೊಳ್ಳಲು ಅವಕಾಶವನ್ನೇ ನೀಡಿರಲಿಲ್ಲ..ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪ್ರಯಾಣ ವಿನಾಯಿತಿ ನೀಡಿದ ನಂತರ ಅಮೀರ್ ಖಾನ್ ಮುತ್ತಾಕಿ ಅವರ ಪ್ರವಾಸ ಸಾಧ್ಯವಾಗಿದೆ.

ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ, ಭಾರತಕ್ಕೆ ಬಂದು ಅಫ್ಘಾನ್ ಕಾನೂನು ಹೇರಲು ಮುತ್ತಖಿ ಯಾರು?

ಮುತ್ತಖಿ

ನವದೆಹಲಿ, ಅಕ್ಟೋಬರ್ 11: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ತಾಲಿಬಾನ್ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಖಿ, ಭಾರತವನ್ನು ಅಫ್ಘಾನಿಸ್ತಾನದಂತೆ ನಡೆಸಿಕೊಂಡಿದ್ದಾರೆ. ಅವರು ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಪಾಲ್ಗೊಳ್ಳಲು ಅವಕಾಶವನ್ನೇ ನೀಡಿರಲಿಲ್ಲ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪ್ರಯಾಣ ವಿನಾಯಿತಿ ನೀಡಿದ ನಂತರ ಅಮೀರ್ ಖಾನ್ ಮುತ್ತಾಕಿ ಅವರ ಪ್ರವಾಸ ಸಾಧ್ಯವಾಗಿದೆ. ಇದು 2021 ರಲ್ಲಿ ಅಮೆರಿಕ ತನ್ನ ನೇತೃತ್ವದ ಪಡೆಗಳನ್ನು ಹಿಂತೆಗೆದುಕೊಂಡ ಬೆನ್ನಲ್ಲೆ ಅಧಿಕಾರಕ್ಕೆ ಮರಳಿದ ನಂತರ ಉನ್ನತ ತಾಲಿಬಾನ್ ನಾಯಕರೊಬ್ಬರು ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ.

ಮಹಿಳಾ ಪತ್ರಕರ್ತರು ಸೇರಿದಂತೆ ಹಲವಾರು ನಾಯಕರು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ದೇಶದ ಮೇಲೆ, ವಿಶೇಷವಾಗಿ ನಮ್ಮ ಸ್ವಂತ ನೆಲದಲ್ಲಿ ತನ್ನ ಷರತ್ತುಗಳನ್ನು ಹೇರಲು ಮುತ್ತಖಿ ಯಾರು ಎಂದು ಕೇಳಲಾಗುತ್ತಿದೆ.

ಅಕ್ಟೋಬರ್ 10, ಶುಕ್ರವಾರ, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಖಿ ಅವರನ್ನು ಭೇಟಿಯಾದರು. ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಲಾಯಿತು, ನಂತರ ಆಮೀರ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಮಧ್ಯಾಹ್ನ ಅಫ್ಘಾನ್ ರಾಯಭಾರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಿಳೆಯರಿಗೆ ಭಾಗವಹಿಸುವುದನ್ನು ನಿಷೇಧಿಸಲಾಯಿತು. ಮತ್ತೊಂದು ದೇಶದ ನಾಯಕನೊಬ್ಬ ನವದೆಹಲಿಯಲ್ಲಿ ಅಧಿಕೃತ ಮಾಧ್ಯಮಗೋಷ್ಠಿ ನಡೆಸಿ ಮಹಿಳಾ ಪತ್ರಕರ್ತರನ್ನು ಹೊರಗಿಡುವುದು ಅಸಾಮಾನ್ಯ ಎಂದು ಭಾರತ ಹೇಳಿದೆ. ಆದಾಗ್ಯೂ, ಮುತ್ತಖಿಯ ಸುದ್ದಿಗೋಷ್ಠಿಗೆ ಮಹಿಳಾ ಪತ್ರಕರ್ತರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ತಾಲಿಬಾನ್ ಕಡೆಯವರು ಭಾರತೀಯ ಅಧಿಕಾರಿಗಳಿಗೆ ಔಪಚಾರಿಕವಾಗಿ ತಿಳಿಸಿದ್ದಾರೆಯೇ ಎಂಬುದು ತಿಳಿದಿಲ್ಲ.

ಅನೇಕ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಪುರುಷ ಪತ್ರಕರ್ತರು ಸುದ್ದಿಗೋಷ್ಠಿಯಿಂದ ಹೊರನಡೆಯಬೇಕಿತ್ತು ಎಂದಿದ್ದಾರೆ. ಭಾರತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಳ್ವಿಕೆಯನ್ನು ಗುರುತಿಸದ ಕಾರಣ, ತಾಲಿಬಾನ್ ಧ್ವಜಕ್ಕೂ ಅಧಿಕೃತ ಸ್ಥಾನಮಾನ ನೀಡಿಲ್ಲ. ಇಲ್ಲಿಯವರೆಗೆ, ನವದೆಹಲಿಯಲ್ಲಿರುವ ಅಫ್ಘಾನ್ ರಾಯಭಾರ ಕಚೇರಿಯಲ್ಲಿ, ತಾಲಿಬಾನ್ ನ ಅಧಿಕೃತ ಧ್ವಜವಾಗಿರುವ ಇಸ್ಲಾಮಿಕ್ ನಂಬಿಕೆಯ ಶಹಾದಾ ಘೋಷಣೆಯ ಕಪ್ಪು ಪದಗಳನ್ನು ಹೊಂದಿರುವ ಸಾದಾ ಬಿಳಿ ಬಟ್ಟೆಯ ಧ್ವಜವನ್ನು ಹಾರಿಸುವುದಕ್ಕೆ ನವದೆಹಲಿ ಅನುಮತಿಸಿಲ್ಲ.

ರಾಯಭಾರ ಕಚೇರಿ ಇನ್ನೂ ಅಫ್ಘಾನಿಸ್ತಾನದ ಇಸ್ಲಾಮಿಕ್ ಗಣರಾಜ್ಯದ ಹಳೆಯ ಧ್ವಜವನ್ನು ಹಾರಿಸುತ್ತದೆ. ಅದು ಪದಚ್ಯುತಗೊಂಡ ಅಧ್ಯಕ್ಷ ಅಶ್ರಫ್ ಘನಿ ಅವರ ಆಡಳಿತಾವಧಿಯಲ್ಲಿ ಅಧಿಕೃತವಾಗಿತ್ತು.

ತಾಲಿಬಾನ್ ಸರ್ಕಾರ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹೆಣ್ಣುಮಕ್ಕಳ ವಿಷಯದಲ್ಲಿ ಸಾಕಷ್ಟು ಕಾನೂನುಗಳನ್ನು ಇವರು ಜಾರಿಗೆ ತಂದಿದ್ದಾರೆ. ಇದೀಗ ಭಾರತಕ್ಕೆ ಬಂದಿ ಇಲ್ಲಿನ ಹೆಣ್ಣುಮಕ್ಕಳಿಗೆ ನಿಷೇಧ ಹೇರಿರುವುದಕ್ಕೆ ಆಕ್ರೋಶ ಭುಗಿಲೆದ್ದಿದೆ.

Previous Post

ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

Next Post

ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

Next Post

ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.