Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    ಮೈಸೂರು ದಸರಾದಲ್ಲಿ ಬಲೂನು ಮಾರಲು ಬಂದ 9 ವರ್ಷ ಬಾಲಕಿಯನ್ನು ಅತ್ಯಾ*ಚಾರವೆಸಗಿ, ಕೊಲೆಗೈದ ಆರೋಪಿ ಅರೆಸ್ಟ್!

    ಮೈಸೂರಿನಲ್ಲಿ ಬಾಲಕಿ ಅತ್ಯಾ*ರ ಕೊಲೆ ಪ್ರಕರಣ, ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    ಮೈಸೂರು ದಸರಾದಲ್ಲಿ ಬಲೂನು ಮಾರಲು ಬಂದ 9 ವರ್ಷ ಬಾಲಕಿಯನ್ನು ಅತ್ಯಾ*ಚಾರವೆಸಗಿ, ಕೊಲೆಗೈದ ಆರೋಪಿ ಅರೆಸ್ಟ್!

    ಮೈಸೂರಿನಲ್ಲಿ ಬಾಲಕಿ ಅತ್ಯಾ*ರ ಕೊಲೆ ಪ್ರಕರಣ, ಆರೋಪಿ ಮೇಲೆ ಪೊಲೀಸರ ಗುಂಡಿನ ದಾಳಿ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

editor tv by editor tv
October 11, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ನಿತೀಶ್​ ಕುಮಾರ್ ಅವರ ಜನತಾ ದಳ ಯುನೈಟೆಡ್​ (ಜೆಡಿಯು), ಬಿಜೆಪಿ ಹಾಗೂ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಸೀಟು ಹಂಚಿಕೆ ಮಾಡಿಕೊಂಡಿವೆ. ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 243 ಕ್ಷೇತ್ರಗಳಿದ್ದು ಇದರಲ್ಲಿ 240 ಕ್ಷೇತ್ರಗಳ ಕುರಿತು ಮಾತುಕತೆ ಆಗಿದೆ.

11 Oct 2025 08

BIHAR_ELECTIONS

ಪಾಟ್ನಾ: ಬಿಹಾರದ ವಿಧಾನಸಭೆ ಚುನಾವಣೆಗೆ ಮೊನ್ನೆ ಮೊನ್ನೆ ಅಷ್ಟೇ ದಿನಾಂಕ ಘೋಷಣೆ ಮಾಡಲಾಗಿದ್ದು ಇದರ ಬೆನ್ನಲ್ಲೇ ನ್ಯಾಷನಲ್ ಡೆಮಾಕ್ರಟಿಕ್​ ಅಲೈನ್ಸ್​ (ಎನ್​ಡಿಎ) ಸೀಟು ಹಂಚಿಕೆಯೂ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಯಾವುದೇ ಪಕ್ಷ ಅಥವಾ ರಾಜಕೀಯ ನಾಯಕರು ಅಧಿಕೃತವಾಗಿ ಮಾಹಿತಿ ನೀಡಿಲ್ಲ. 

ಸಿಎಂ ನಿತೀಶ್​ ಕುಮಾರ್ ಅವರ ಜನತಾ ದಳ ಯುನಿಟೆಡ್​ (ಜೆಡಿಯು), ಬಿಜೆಪಿ ಹಾಗೂ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಸೀಟು ಹಂಚಿಕೆ ಮಾಡಿಕೊಂಡಿವೆ. ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 243 ಕ್ಷೇತ್ರಗಳಿದ್ದು ಇದರಲ್ಲಿ ಇದರಲ್ಲಿ 240 ಕ್ಷೇತ್ರಗಳ ಕುರಿತು ಮಾತುಕತೆ ಆಗಿದೆ. ಉಳಿದ ಮೂರು ಸ್ಥಾನ ಬಗ್ಗೆ ಮಾತುಕತೆ ಮುಂದುವರೆದಿದೆ ಎನ್ನಲಾಗಿದೆ. 

ಮೂಲಗಳ ಪ್ರಕಾರ ಸೀಟ್​ ಹಂಚಿಕೆ ಈ ರೀತಿ ಇದೆ. 

  • ಜನತಾ ದಳ ಯುನೈಟೆಡ್ (ಜೆಡಿಯು)- 101 ಸ್ಥಾನಗಳು
  • ಭಾರತೀಯ ಜನತಾ ಪಕ್ಷ (ಬಿಜೆಪಿ)- 100 ಸೀಟ್​ಗಳು
  • ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)- 26 ಸ್ಥಾನಗಳು
  • ಹಿಂದೂಸ್ತಾನಿ ಅವಾಮ್ ಮೋರ್ಚಾ (HAM)- 7 ಕ್ಷೇತ್ರಗಳು
  • ರಾಷ್ಟ್ರೀಯ ಲೋಕ ಮೋರ್ಚಾ (RLM)- 6 ಸ್ಥಾನಗಳು
BIHAR_ELECTION

ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 40 ರಿಂದ 50 ಸ್ಥಾನಗಳಲ್ಲಿ ಸ್ಪರ್ಧೆ ಮಾಡುವುದಾಗಿ ಬೇಡಿಕೆ ಇಟ್ಟಿದೆ. ಆದರೆ ಬಿಜೆಪಿಯು 20 ರಿಂದ 25 ಸ್ಥಾನಗಳ ಆಫರ್ ನೀಡಿದೆ. ಕೇಂದ್ರ ಸಚಿವ ಜಿತನ್ ರಾಮ್​ ಮಾಂಜಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ ಪಕ್ಷ 15 ಕ್ಷೇತ್ರಗಳು ಬೇಕೆಂದು ಬೇಡಿಕೆ ಇಟ್ಟರೇ, ಇದಕ್ಕೆ ಬಿಜೆಪಿ ಕೇವಲ 7 ಕ್ಷೇತ್ರಗಳು ನೀಡುವುದಾಗಿ ಹೇಳಿದೆ. ಸದ್ಯ ಎನ್​ಡಿಎಗೆ ಸೀಟ್​ಗಳ ಹಂಚಿಕೆಯು ದೊಡ್ಡ ತಲೆ ನೋವಾಗಿದ್ದು ಶೀಘ್ರದಲ್ಲೇ ಅಂತಿಮ ಘೋಷಣೆ ಹೊರ ಬೀಳಲಿದೆ.  

ಕೇಂದ್ರ ಚುನಾವಣಾ ಆಯೋಗವು ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಎರಡು ಹಂತದಲ್ಲಿ ಎಲೆಕ್ಷನ್ ನಡೆಯಲಿದ್ದು ನೆವೆಂಬರ್​ 6 ಹಾಗೂ ನವೆಂಬರ್ 11 ರಂದು ಮತದಾನ ನಡೆಯಲಿದೆ. ನವೆಂಬರ್ 14 ರಂದು ವೋಟ್​ಗಳ ಕೌಂಟಿಂಗ್ ಇರಲಿದ್ದು ಅಂತಿಮ ಫಲಿತಾಂಶ ಹೊರ ಬೀಳಲಿದೆ.

Previous Post

ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.