Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

editor tv by editor tv
October 13, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಆರ್​ಎಸ್​ಎಸ್ ನಿಷೇಧಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದಾರೆ. ಆದರೆ, ಅವರ ತವರು ಜಿಲ್ಲೆ ಕಲಬುರಗಿಯಲ್ಲೇ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಒಡೆತನದ ಶಾಲೆಯಲ್ಲೇ ಆರ್​ಎಸ್​ಎಸ್ ಬೈಠಕ್ ಹಾಗೂ ಪಥಸಂಚಲನ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸದ್ಯ, ಪಾಟೀಲ್ ಅವರು ಶಾಲೆಯಲ್ಲಿ ಅನುಮತಿ ಕೊಟ್ಟ ಬಗ್ಗೆ ಸಮರ್ಥಿಸಿಕೊಳ್ಳುವ ಮಾತುಗಳನ್ನಾಡಿದ್ದರೂ, ಆರ್​​ಎಸ್​​ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

ಕಲಬುರಗಿ, ಅಕ್ಟೋಬರ್ 13: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕರ್ನಾಟಕದಲ್ಲಿ ಆರ್​ಎಸ್​ಎಸ್ ಅನ್ನು (RSS) ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ, ಅವರದೇ ತವರು ಜಿಲ್ಲೆ ಕಲಬುರಗಿಯಲ್ಲಿ, ಅವರದೇ ಪಕ್ಷದ ಶಾಸಕ ಎಂವೈ ಪಾಟೀಲ್ (MY Patil) ಒಡೆತನದ ಶಾಲೆಯಲ್ಲಿ ಭಾನುವಾರ ಸಂಜೆ ಆರ್​ಎಸ್​ಎಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲದೆ, ಶಾಲೆಯ ಆವರಣದಲ್ಲಿ ಆರ್​ಎಸ್​ಎಸ್ ಪಥಸಂಚಲನ ಕೂಡ ನಡೆದಿದೆ. ಅಫಜಲಪುರ ಕಾಂಗ್ರೆಸ್  ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ನಡೆದಿದೆ.

ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​​ಎಸ್​​ಎಸ್ ಪಥಸಂಚಲನ ನಡೆಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಾಲೆ ಸಾರ್ವಜನಿಕರ ಸ್ವತ್ತು. ಇಲ್ಲಿಯವರೆಗೆ ಎಲ್ಲಾ ಪಕ್ಷದವರಿಗೆ ಕಾರ್ಯಕ್ರಮ ಮಾಡಿಕೊಡಲು ಜಾಗ ಕೊಟ್ಟಿದ್ದೇವೆ. ನಮ್ಮದು ದ್ರಾವಿಡ, ಬುಡಕಟ್ಟು ಮನಸ್ಥಿತಿ. ಆದರೆ, ಆರ್​​ಎಸ್​ಎಸ್ ಅವರನ್ನು ಆರ್ಯ ಸಮಾಜ ಪರಿಕಲ್ಪನೆ ಇದೆ. ಆರ್​​ಎಸ್​ಎಸ್ ಮೂಲ ಉದ್ದೇಶವೇ ಬೇರೆ. ಅವರು ನಡೆದುಕೊಳ್ಳುತ್ತಿರುವ ರೀತಿಯೇ ಬೇರೆ ಎಂದರು.

ಆರ್​​ಎಸ್​ಎಸ್ ನಿಷೇಧ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಆರ್​​ಎಸ್​ಎಸ್ ಚಟುವಟಿಕೆ ನಿಷೇಧ ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಪ್ರತಿಕ್ರಿಯಿಸಿದ್ದು, ಅದಕ್ಕೆ ಯಾವುದೇ ಆಕ್ಷೇಪವಿಲ್ಲ. ಆರ್​​ಎಸ್​ಎಸ್ ಸಂಘಟನೆ ಉದ್ದೇಶ ಸರಿಯಲ್ಲ. ಅವರಲ್ಲೂ ಸ್ವಾತಂತ್ರ್ಯಕ್ಕೆ ಬಲಿಯಾದವರು ಒಬ್ಬರೋ ಇಬ್ಬರೋ ಇರಬಹುದು. ಆರ್​​ಎಸ್​​ಎಸ್​​ನವರು ಲಾಠಿ ಬಿಟ್ಟು ತಿರಂಗಾ ಬಾವುಟ ಹಿಡಿಯಲಿ. ಅವರು ತಿರಂಗಾ ಬಾವುಟ ಹಿಡಿದ್ರೆ ನಾವು ಸ್ವಾಗತ ಮಾಡುತ್ತೇವೆ. ಅದು ಬಿಟ್ಟು ಲಾಠಿ ಹಿಡಿದು ಪಥಸಂಚಲನ ಮಾಡಿದರೆ ಖಂಡಿಸುತ್ತೇವೆ ಎಂದಿದ್ದಾರೆ.

ಆರ್​​ಎಸ್​ಎಸ್ ಯಾಕೆ ಕೇಂದ್ರ ಕಚೇರಿ ಮೇಲೆ ತಿರಂಗಾ ಬಾವುಟ ಹಾರಿಸಲ್ಲ? ಅದು ದೇಶ ಕಟ್ಟುವ ಸಂಘಟನೆ ಅಲ್ಲ, ಬದಲಾಗಿ ದೇಶ ಒಡೆಯುವ ಸಂಘಟನೆ ಎಂದು ಎಂವೈ ಪಾಟೀಲ್ ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಘದ ಪಥಸಂಚಲನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಂಘಟದ ಚಟುವಟಿಕೆಗಳ ನಿಷೇಧಕ್ಕೆ ಮನವಿ ಮಾಡಿದ್ದಾರೆ. ಆದರೆ, ಅದೇ ಸಮಯದಲ್ಲಿ ಅವರದೇ ಪಕ್ಷದ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರ್​​ಎಸ್​ಎಸ್ ಕಾರ್ಯಕ್ರಮ ನಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

Previous Post

ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.