Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಕಾರ್ಕಳ ಮಾಜಿ ಶಾಸಕನ ಪುತ್ರ..

    ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನ ಜೈಲಿಗೆ ಹಾಕಿದ ಪೊಲೀಸರು.. ಕಾರಣ?

    ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಕಾರ್ಕಳ ಮಾಜಿ ಶಾಸಕನ ಪುತ್ರ..

    ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನ ಜೈಲಿಗೆ ಹಾಕಿದ ಪೊಲೀಸರು.. ಕಾರಣ?

    ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

editor tv by editor tv
October 14, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

ಮಂಗಳೂರು, ಅ. 13 : ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಮದುವೆ ಪ್ರಸ್ತಾಪದ ನೆಪದಲ್ಲಿ ವ್ಯಕ್ತಿಗಳು 45 ಲಕ್ಷ  ಹೆಚ್ಚು ಹಣ ಸುಲಿಗೆ ಮಾಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಕೇರಳದ ತಾವರಕಡನ್ ಮೂಲದ ಮಹಮ್ಮದ್ ಅಶ್ರಫ್ ಎಂಬವರು ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿದ್ದು 2024ರ ಸೆಪ್ಟಂಬರ್‌ನಲ್ಲಿ ಎರಡನೇ ಮದುವೆಗಾಗಿ ಮಂಗಳೂರಿನ ಹೆಣ್ಣು ನೋಡಲು ಬಂದಿದ್ದರು. ಇವರಿಗೆ ಪರಿಚಯದ ಕಡಂಬು ಬಶೀರ್ ಮತ್ತು ಹನಿಟ್ರ್ಯಾಪ್ ರಾಣಿ ಮಾಣಿ ಸೆಫಿಯಾ ಅವರು ಅಶ್ರಫ್ ಗೆ ಹೆಣ್ಣು ತೋರಿಸುವುದಾಗಿ ಭರವಸೆ ನೀಡಿದ್ದಾರೆ. ಬಶೀರ್ ತನ್ನ ಸಂಬಂಧಿಕಳಾಗಿದ್ದ ಆಯಿಷತ್ ಮಿಸ್ರಿಯಾ ಎಂಬಾಕೆಯನ್ನು ವಿಟ್ಲದ ಸರಫುದ್ಧೀನ್ ಹಾಗೂ ಮತ್ತಿಬ್ಬರು ಕರೆತಂದು ಹೆಣ್ಣು ತೋರಿಸುವ ನಾಟಕವಾಡಿದ್ದಾರೆ.

ವಂಚಕರ ನಿಜಬಣ್ಣ ಅರಿಯದ ಮಹಮ್ಮದ್ ಅಶ್ರಫ್ ಹೆಣ್ಣಿಗೆ ಒಪ್ಪಿಗೆ ಸೂಚಿಸಿದ್ದು ಜೊತೆಯಾಗಿ ಕುಳಿತು ಫೊಟೋ, ವೀಡಿಯೋ ಮಾಡಿಸಿದ್ದಾರೆ. ಕೆಲದಿನಗಳ ಬಳಿಕ ಆರೋಪಿಗಳ ಪೈಕಿ ಕಡಂಬು ಬಶೀರ್ ಎಂಬಾತ ಮಹಮ್ಮದ್ ಅಶ್ರಫ್ ಗೆ ಕರೆ ಮಾಡಿದ್ದು ನಿನ್ನ ಮತ್ತು ಆಯಿಷತ್ ಮಿಸ್ರಿಯಾಳ ನಗ್ನ ಫೊಟೋ, ವೀಡಿಯೋಗಳು ನಮ್ಮಲ್ಲಿದ್ದು ಒಂದು ಕೋಟಿ ಹಣ  ಕೊಡದಿದ್ದರೆ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಅಲ್ಲದೇ ಅಶ್ರಫ್ ಅವರ ಮೊದಲ ಪತ್ನಿ ಮತ್ತು ಸಂಬಂಧಿಕರ ಮೊಬೈಲಿಗೆ ಎಐನಿಂದ ಮಾಡಿದ್ದ ವೀಡಿಯೋ ಹಾಕಿದ್ದಾರೆ.

ಇದರಿಂದ ಬೆದರಿದ ಅಶ್ರಫ್ ಅವರು ಆರೋಪಿಗಳಿಗೆ ಇಪ್ಪತ್ತು ಲಕ್ಷ ನೀಡಿದ್ದಾರೆ. ಬಳಿಕ ಮತ್ತೆ ಬಶೀರ್, ಸರಫುದ್ಧೀನ್ ಹಾಗೂ ಇತರರು ಅಶ್ರಫ್ ಅವರನ್ನು ಕರೆಸಿಕೊಂಡು ಕೋಣೆಯಲ್ಲಿ ಕೂಡಿ ಹಾಕಿ ಥಳಿಸಿದ್ದು ಮತ್ತೆ ಮೂವತ್ತು ಲಕ್ಷ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಮರ್ಯಾದೆಗೆ ಅಂಜಿದ ಅಶ್ರಫ್ ಅವರು ಸರಪುದ್ಧೀನ್ ಖಾತೆಗೆ ಒಂಬತ್ತು ಲಕ್ಷ, ಬಶೀರ್, ಸೆಪಿಯಾ ಹಾಗೂ ಮತ್ತಿತರ ಆರೋಪಿಗಳಿಗೂ ಒಟ್ಟು ಇಪ್ಪತ್ನಾಲ್ಕು ಲಕ್ಷ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಇಷ್ಟೆಲ್ಲ ಹಣ ನೀಡಿದ್ದರೂ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರಿಂದ ಮಹಮ್ಮದ್ ಅಶ್ರಫ್ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಅ ಕ್ರ : 145/2025 ಕಲಂ : 318(4), 308(2), 115(2), 351(2), r/w 3(5) ಬಿಎನ್ಎಸ್ -2023ರಂತೆ ಪ್ರಕರಣ ದಾಖಲಾಗಿದೆ.

Previous Post

ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

Next Post

ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನ ಜೈಲಿಗೆ ಹಾಕಿದ ಪೊಲೀಸರು.. ಕಾರಣ?

Next Post

ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನ ಜೈಲಿಗೆ ಹಾಕಿದ ಪೊಲೀಸರು.. ಕಾರಣ?

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.