

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ಅವರು ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ ಇನ್ನೆರಡು ದಿನಗಳಲ್ಲಿ ನಿತೀಶ್ ಮತ್ತು ತೇಜಸ್ವಿ ಯಾದವ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾಗಲಿದ್ದು, ನಿತೀಶ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಈಗಾಗಲೇ ಆರ್ಜೆಡಿ ಮತ್ತು ಜೆಡಿಯು ನಡುವೆ ಮಾತುಕತೆ ಸಫಲವಾಗಿದ್ದು, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗುವ ಸಾಧ್ಯತೆಯಿದೆ. ಈ ಎಲ್ಲಾ ಮಾತುಕತೆಯ ಬೆನ್ನಲ್ಲೇ ನಿತೀಶ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ಗೆ ಕಾಂಗ್ರೆಸ್, ಸಿಪಿಐಎಂಎಲ್ ಸೇರಿದಂತೆ ಬಿಜೆಪಿಯೇತರ ಎಲ್ಲ ಪಕ್ಷಗಳೂ ಬೆಂಬಲ ನೀಡಿವೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಬಿರುಕುಗೊಂಡ ರೀತಿಯಲ್ಲೇ ಜೆಡಿಯು ಪಕ್ಷದ ಶಾಸಕರನ್ನೂ ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಊಹಾಪೋಹಗಳ ನಡುವೆ ಹೊಸ ರಾಜಕೀಯ ಬೆಳವಣಿಗೆಗೆ ಬಿಹಾರ ಸಾಕ್ಷಿಯಾಗಿತ್ತು. ಕಾಂಗ್ರೆಸ್ ಮತ್ತು ಸಿಪಿಐಎಂಎಲ್ ಪಕ್ಷ ಈಗಾಗಲೇ ನಿತೀಶ್ ಕುಮಾರ್ಗೆ ಬೆಂಬಲ ನೀಡುವುದಾಗಿ ತಿಳಿಸಿವೆ. ಬಿಜೆಪಿ ಜತೆಗಿನ ಮೈತ್ರಿ ಮುಇದು ಆಚೆ ಬಂದರೆ ನಿತೀಶ್ ಕುಮಾರ್ಗೆ ಬೆಂಬಲ ನೀಡಿತ್ತು. ನಂತರ ತೇಜಸ್ವಿ ಯಾದವ್ ಕೂಡ ಬೆಂಬಲ ನೀಡುವುದರೊಂದಿಗೆ, ಬಿಹಾರದಲ್ಲಿ ಮತ್ತೊಮ್ಮೆ ಮಹಾಘಟ ಬಂಧನ ಸರ್ಕಾರ ಅಧಿಕಾರಕ್ಕೆ ಬರುವುದು ಸ್ಪಷ್ಟವಾಯಿತು.
