Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Nuclear Disaster Fear: ಉಕ್ರೇನ್​ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ; ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ, ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು

editor tv by editor tv
August 12, 2022
in ವಿದೇಶ, ಸುದ್ದಿ
0
Nuclear Disaster Fear: ಉಕ್ರೇನ್​ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ; ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ, ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು
1.9k
VIEWS
Share on FacebookShare on TwitterShare on Whatsapp

ನ್ಯೂಯಾರ್ಕ್: ರಷ್ಯಾ ವಶದಲ್ಲಿರುವ ಉಕ್ರೇನ್​ನ (Russia Ukraine Crisis) ಝಪೊರಿಖ್​​ಝಿಯಾ (Zaporizhzhia) ಅಣು ಸ್ಥಾವರದ (Nuclear Reactor) ಮೇಲೆ ರಾಕೆಟ್ ದಾಳಿ ನಡೆದಿದೆ. ಯೂರೋಪ್​ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದ ಅಣುವಿಕರಣ (Nuclear Radiation) ಸೋರಿಕೆಯ ಭೀತಿ ಎದುರಾಗಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯು (United Nations Security Council – UNSC) ತುರ್ತು ಸಭೆ ಕರೆದು, ಉಕ್ರೇನ್ ಮತ್ತು ರಷ್ಯಾ ತಕ್ಷಣ ಇಲ್ಲಿ ಮಿಲಿಟರಿ ಕಾರ್ಯಾಚಚರಣೆ ನಿಲ್ಲಿಸಬೇಕು ಎಂದು ತಾಕೀತು ಮಾಡಿತು. ವಿಶ್ವ ಸಮುದಾಯವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ವಿಕಿರಣ ದುರಂತಕ್ಕೆ ಜಗತ್ತು ಸಾಕ್ಷಿಯಾಗಬೇಕಾಗುತ್ತದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ಅಣುಸ್ಥಾವರದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಉಕ್ರೇನ್ ಮತ್ತು ರಷ್ಯಾ ದೇಶಗಳು ಪರಸ್ಪರರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ.

‘ಗಂಭೀರ ದುರಂತವೊಂದು ನಮಗೆ ಎದುರಾಗುವಂಥ ಸನ್ನಿವೇಶ ಇದು’ ಎಂದು ವಿಶ್ವ ಅಣುಶಕ್ತಿ ಸಂಸ್ಥೆಯ (International Atomic Energy Agency – IAEA) ಮುಖ್ಯಸ್ಥರಾದ ರಫೇಲ್ ಗ್ರೊಸಿ ಭದ್ರತಾ ಮಂಡಳಿಯನ್ನು ಎಚ್ಚರಿಸಿದರು. ವಿಶ್ವ ಅಣುಶಕ್ತಿ ಸಂಸ್ಥೆಗೆ ತುರ್ತಾಗಿ ಝಪೊರಿಖ್​​ಝಿಯಾ ಅಣುಸ್ಥಾವರ ಭೇಟಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಅಣುಸ್ಥಾವರದ ಮೇಲಿನ ದಾಳಿ ಕುರಿತು ಉಕ್ರೇನ್​ ರಾಜಧಾನಿ ಕೀವ್​ನಲ್ಲಿ ಪ್ರತಿಕ್ರಿಯಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ, ರಷ್ಯಾ ಪಡೆಗಳು ಇಡೀ ಜಗತ್ತಿಗೆ ’ಅಣುವಿಕಿರಣದ ಬೆದರಿಕೆ’ (Nuclear Blackmail) ಹಾಕಿವೆ. ಝಪೊರಿಖ್​​ಝಿಯಾ ಆಕ್ರಮಿಸಿಕೊಂಡಿರುವವರನ್ನು ಹೊರದಬ್ಬಲು ವಿಶ್ವ ಸಮುದಾಯವು ತಕ್ಷಣ ಪ್ರತಿಕ್ರಿಯಿಸಬೇಕು ಎಂದು ಕರೆ ನೀಡಿದ್ದಾರೆ. ‘ಉಕ್ರೇನ್​ನಿಂದ ರಷ್ಯನ್ನರು ಸಂಪೂರ್ಣವಾಗಿ ಹಿಂದೆ ಸರಿಯುವುದು ಮಾತ್ರವೇ ಯೂರೋಪ್​ಗೆ ಅಣುವಿಕಿರಣ ದುರಂತದಿಂದ ರಕ್ಷಣೆ ನೀಡುವ ಖಾತ್ರಿ ಸಿಗಲು ಸಾಧ್ಯ’ ಎಂದು ಝೆಲೆನ್​ಸ್ಕಿ ವಿಡಿಯೊ ಸಂದೇಶದಲ್ಲಿ ತಿಳಿಸಿದರು.

ಝಪೊರಿಖ್​​ಝಿಯಾ ಅಣುಸ್ಥಾವರದ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಷ್ಯಾ ಮತ್ತು ಉಕ್ರೇನ್​ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿವೆ. ಕಳೆದ ಐದು ತಿಂಗಳಿನಿಂದ ನಡೆಯುತ್ತಿರುವ ಉಕ್ರೇನ್ ಸಂಘರ್ಷದಲ್ಲಿ ಇದು ಅತ್ಯಂತ ಅಪಾಯಕಾರಿ ಸನ್ನಿವೇಶ ಎಂದು ವಿಶ್ಲೇಷಿಸಲಾಗಿದೆ. ಅಣುಸ್ಥಾವರದಲ್ಲಿ ರೇಡಿಯೊ ವಿಕಿರಣ ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಪ್ರದೇಶದಲ್ಲಿ ಎರಡೂ ಪಡೆಗಳು ರಾಕೆಟ್ ದಾಳಿ ಮಾಡಿವೆ. ತುಸು ಹೆಚ್ಚುಕಡಿಮೆಯಾದರೂ ವಿಕಿರಣ ಸೋರಿಕೆಯಾಗಿ ಇಡೀ ಜಗತ್ತು ಅಪಾಯದಲ್ಲಿ ಸಿಲುಕಬಹುದು ಎಂಬ ಆತಂಕ ವ್ಯಕ್ತವಾಗಿದೆ.

ಶೆಲ್ ದಾಳಿಯ ನಂತರ ಸ್ಥಾವರದ ಆರು ರಿಯಾಕ್ಟರ್​ಗಳಿಂದ ಅಧಿಕ ಪ್ರಮಾಣದ ಹೊಗೆ ಹೊರಬರುತ್ತಿದೆ. ವಿಕರಣಗಳನ್ನು ಅಳೆಯುವ ಹಲವು ಸೆನ್ಸಾರ್​ಗಳು ಹಾಳಾಗಿವೆ. ಉಕ್ರೇನ್​ ದಾಳಿಯೇ ಇದಕ್ಕೆ ಕಾರಣ ಎಂದು ರಷ್ಯಾ ಪರ ಗುರುತಿಸಿಕೊಂಡಿರುವ ಪ್ರಾದೇಶಿಕ ಆಡಳಿತ ಮಂಡಳಿಯ ಸದಸ್ಯ ವ್ಲಾದಿಮಿರ್ ರೊಗೊವ್ ಹೇಳಿದ್ದಾರೆ.

ಉಕ್ರೇನ್ ಸರ್ಕಾರದ ನಿರ್ವಹಣೆಯಲ್ಲಿದ್ದ ಈ ಅಣು ಸ್ಥಾವರವು ಪ್ರಸ್ತುತ ರಷ್ಯಾ ಪಡೆಗಳ ನಿಯಂತ್ರಣದಲ್ಲಿವೆ. ಇದೇ ಸ್ಥಾವರದಲ್ಲಿ ರಷ್ಯಾ ದೇಶವು ತನ್ನ ಪಡೆಗಳು ಮತ್ತು ಯುದ್ಧೋಪಕರಣಗಳನ್ನು ಇರಿಸಿದೆ ಎಂದು ಉಕ್ರೇನ್ ಆರೋಪ ಮಾಡಿದೆ.

Previous Post

ಪಾಝಿಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ಪರಿಹಾರದ ಚೆಕ್ಕನ್ನು ಅವರ ನಿವಾಸದಲ್ಲಿಂದು ವಿತರಿಸಲಾಯಿತು.

Next Post

ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ:ಹೆಚ್.ಡಿ.ಕೆ

Next Post
ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ:ಹೆಚ್.ಡಿ.ಕೆ

ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ:ಹೆಚ್.ಡಿ.ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.