Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡಲು ಶಾಲೆಗೆ ರಜೆ ಕೊಟ್ಟು ಹಬ್ಬದ ಕಾರಣ ನೀಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ: SDPI ಆರೋಪ

editor tv by editor tv
August 31, 2022
in ಕರಾವಳಿ, ಸುದ್ದಿ
0
ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡಲು ಶಾಲೆಗೆ ರಜೆ ಕೊಟ್ಟು ಹಬ್ಬದ ಕಾರಣ ನೀಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ: SDPI ಆರೋಪ
1.9k
VIEWS
Share on FacebookShare on TwitterShare on Whatsapp

ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡಲು ಶಾಲೆಗೆ ರಜೆ ಕೊಟ್ಟು ಹಬ್ಬದ ಕಾರಣ ನೀಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ: SDPI ಆರೋಪ

ಮಂಗಳೂರು ಅ 30: ಸೆಪ್ಟೆಂಬರ್ ಎರಡನೇ ತಾರೀಕಿನಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಸರಕಾರಿ ಆದೇಶ ಹೊರಡಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅನಗತ್ಯ ವಿವಾದವನ್ನು ಉಂಟು ಮಾಡುವ ಹೊಸ ಸಂಪ್ರದಾಯವೊಂಂದನ್ನು ಹುಟ್ಟುಹಾಕಿದ್ದಾರೆ. ಆಗಸ್ಟ್ 31 ರಂದು ಗಣೇಶ್ ಚತುರ್ಧಶಿಗೆ ಸರಕಾರಿ ರಜೆ ಇದ್ದರೂ ಪುನಃ ಸೆಪ್ಟೆಂಬರ್ ಎರಡರಂದು ಗಣಪತಿ ವಿಸರ್ಜನೆ ಹೆಸರಿನಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿರುವುದು ಪ್ರಧಾನಿ ಮೋದಿ ಸಬೆಗೆ ಜನ ಸೇರಿಸಲು ನಡೆಸಿದ ಷಡ್ಯತ್ರದ ಭಾಗವಾಗಿದೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಆರೋಪಿಸಿದ್ದಾರೆ.

ಗಣಪತಿಯನ್ನು ವಿಸರ್ಜನೆ ಮಾಡಲು ನಿರ್ಧಿಷ್ಟ ದಿನ ಎಂಬುದಿಲ್ಲ ಗಣೇಶ ಚತುರ್ಥಿ ಆರಂಭಗೊಂಡ ಅಂದಿನಿಂದ ಸುಮಾರು ಹತ್ತು ದಿನಗಳ ಕಾಲ ಬೇರೆ ಬೇರೆ ದಿನಗಳಲ್ಲಿ ಅದನ್ನು ವಿಸರ್ಜನೆ ಮಾಡುವ ಸಂಪ್ರದಾಯ ಅನಾದಿ ಕಾಲದಿಂದಲೂ ನಡೆದು ಬಂದ ಸಂಪ್ರದಾಯ ವಾಗಿದೆ. ಒಂದು ವೇಳೆ ಶೋಭಾ ಯಾತ್ರೆಗೆ ಜನದಟ್ಟಣೆ ಅಧಿಕ ಇರಬಹುದು ಎಂದಾದರೆ ಎಲ್ಲಾ ದರ್ಮಗಳ ಹಬ್ಬಗಳ ಸಂದರ್ಭದಲ್ಲಿ ವಿಶೇಷ ರಜೆ ಘೋಷಣೆ ಮಾಡುತ್ತೀರಾ? , ಜಿಲ್ಲಾಡಳಿತವೇ ಹೇಳಿದ ಹಾಗೆ ಜನದಟ್ಟಣೆ ಜಾಸ್ತಿಯಾಗಿ ಇರುತ್ತದೆ ಎಂದಾದರೆ ಪ್ರಧಾನಿ ಕಾರ್ಯಕ್ರಮದ ಸಂದರ್ಭದಲ್ಲಿ ಭದ್ರತೆ ದ್ರಷ್ಠಿಯಿಂದ ಶೋಭಾ ಯಾತ್ರೆಗೆ ಅಂದು ಅನುಮತಿ ಯಾಕೆ ಕೊಟ್ಟದ್ದು . ಒಂದು ವೇಳೆ ಅಂದು ಶೋಭಾ ಯಾತ್ರೆ ನಡೆಸಬೇಕು ಎಂಬುದು ಕಡ್ಡಾಯ ಆಗಿದ್ದಲ್ಲಿ ಆ ಕಾರಣದಿಂದ ಪ್ರಧಾನಿ ಕಾರ್ಯಕ್ರಮವನ್ನು ಮುಂದೂಡಲು ಸಾದ್ಯವಿರಲಿಲ್ಲವೇ, ಮಂಗಳೂರಿನಲ್ಲಿ ಅದೆಷ್ಟೋ ವರ್ಷಗಳಿಂದ ನೂರಾರು ಕಡೆಗಳಲ್ಲಿ ಅದ್ದೂರಿಯಾಗಿ ಗಣೇಶೋತ್ಸವ ನಡೆಯುತ್ತಿದೆ ಆ ಹೆಸರಿನಲ್ಲಿ ಎಂದಾದರೂ ಶಾಲಾ ಕಾಲೇಜುಗಳಿಗೆ ರಜೆ ನೀಡಿದ ಇತಿಹಾಸ ಇದೆಯಾ ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟ ಪಡಿಸಬೇಕು.

ಸೆಪ್ಟೆಂಬರ್ ಎರಡನೇ ತಾರೀಕಿನಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಭಾಗವಹಿಸಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಡಿಮೆ ಜನ ಸೇರಬಹುದು ಎಂಬ ಭಯದಿಂದ ಬಿಜೆಪಿ ನಾಯಕರು ಅಧಿಕಾರ ಯಂತ್ರವನ್ನು ದುರುಪಯೋಗ ಪಡಿಸಿಕೊಂಡು ಜಿಲ್ಲಾಡಳಿತದ ಮೇಲೆ ಒತ್ತಡ ಹೇರಿ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಯ ಎಲ್ಲರೂ ಕಡ್ಡಾಯ ಬಾಗವಹಿಸಲು ಆದೇಶ ಹೊರಡಿಸಿತ್ತು ಇದರ ಮುಂದುವರಿದ ಭಾಗವಾಗಿ ಗಣೇಶ ವಿಸರ್ಜನೆ ನೆಪದಲ್ಲಿ ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವುದು ಸರಿಯಲ್ಲ , ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡುವ ಏಕೈಕ ಉದ್ದೇಶದಿಂದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುತ್ತಿರುವ ಬಿಜೆಪಿ ಸರಕಾರದ ನಿಲುವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ವರ್ಷ ಸುರಿದ ಮಳೆ ಹಾಗೂ ಅತಿವೃಷ್ಟಿ ಕಾರಣದಿಂದ ಈಗಾಗಲೇ ಹಲವಾರು ದಿನ ಶಾಲಾ ಕಾಲೇಜುಗಳಿಗೆ ಅನಿವಾರ್ಯವಾಗಿ ರಜೆ ನೀಡಲಾಗಿದೆ. ಇದೀಗ ಬಿಜೆಪಿ ಪಕ್ಷದ ರಾಜಕೀಯ ಉದ್ದೇಶಗಳಿಗಾಗಿ ಕ್ಷುಲ್ಲಕ ಕಾರಣಗಳನ್ನು ನೀಡಿ ಅನಗತ್ಯ ರಜೆ ನೀಡಿದರೆ ಅದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಅದ್ದರಿಂದ ಜಿಲ್ಲಾಡಳಿತ ಕೂಡಲೇ ಈ ಸುತ್ತೋಲೆಯನ್ನು ವಾಪಾಸು ಪಡೆಯಬೇಕೆಂದು ಅನ್ವರ್ ಸಾದತ್ ಬಜತ್ತೂರು ಒತ್ತಾಯಿಸಿದ್ದಾರೆ

Previous Post

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್, ಯಥಾಸ್ಥಿತಿ ಕಾಪಾಡಲು ಸುಪ್ರೀಂ ಆದೇಶ!

Next Post

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿ, ಅಮಾನತುಗೊಂಡ ಬಿಜೆಪಿ ನಾಯಕಿ ಬಂಧನ

Next Post
ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿ, ಅಮಾನತುಗೊಂಡ ಬಿಜೆಪಿ ನಾಯಕಿ ಬಂಧನ

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿ, ಅಮಾನತುಗೊಂಡ ಬಿಜೆಪಿ ನಾಯಕಿ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.