Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

IND vs PAK: ಏಷ್ಯಾಕಪ್​ನಲ್ಲಿಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ: ಕೊಹ್ಲಿ ಮೇಲೆ ಎಲ್ಲರ ಕಣ್ಣು

editor tv by editor tv
September 4, 2022
in ಕ್ರೀಡೆ, ಸುದ್ದಿ
0
IND vs PAK: ಏಷ್ಯಾಕಪ್​ನಲ್ಲಿಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ: ಕೊಹ್ಲಿ ಮೇಲೆ ಎಲ್ಲರ ಕಣ್ಣು
1.9k
VIEWS
Share on FacebookShare on TwitterShare on Whatsapp

ಏಷ್ಯಾಕಪ್ 2022ರಲ್ಲಿ (Asia Cup 2022) ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿದ್ದು ಶನಿವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಶ್ರೀಲಂಕಾ ತಂಡ 4 ವಿಕೆಟ್​ ಗಳ ಭರ್ಜರಿ ಜಯ ಸಾಧಿಸಿದೆ. ಇಂದು ಎರಡನೇ ಪಂದ್ಯ ಆಯೋಜಿಸಲಾಗಿದ್ದು ಕ್ರಿಕೆಟ್ ಲೋಕದ ಬದ್ದವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡ ಮುಖಾಮುಖಿ ಆಗಲಿದೆ. ಈ ಬಾರಿಯ ಏಷ್ಯಾಕಪ್​ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಅಮೋಘ ಗೆಲುವು ಕಂಡಿರುವ ಟೀಮ್ ಇಂಡಿಯಾ (Team India) ಜಯದ ನಾಗಾಲೋಟವನ್ನು ಮುಂದುವರೆಸುವ ತವಕದಲ್ಲಿದೆ. ಇತ್ತ ಲೀಗ್ ಹಂತದಲ್ಲಿ ಭಾರತ ವಿರುದ್ಧ ಸೋತ ಪಾಕಿಸ್ತಾನ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಲೀಗ್ ಹಂತದ ಪಂದ್ಯಗಳಲ್ಲಿ ಭಾರತ–ಪಾಕ್ ಮುಖಾಮುಖಿ ಆಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ- ರವೀಂದ್ರ ಜಡೇಜಾ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಕಳೆದ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ಪಾಂಡ್ಯ ಇಂದು ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ. ರವೀಂದ್ರ ಜಡೇಜಾ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇವರ ಬದಲು ಅಕ್ಷರ್ ಪಟೇಲ್​ಗೆ ಸ್ಥಾನ ನೀಡಲಾಗಿದೆ. ಆದರೆ, ಇವರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ನಾಯಕ ರೋಹಿತ್ ಶರ್ಮಾ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಕೂಡ ಫಾರ್ಮ್​ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಆದರೆ, ಕೆಎಲ್ ರಾಹುಲ್ ಬ್ಯಾಟ್ ಸದ್ದು ಮಾಡುತ್ತಿಲ್ಲ. ಏಷ್ಯಾಕಪ್ ಆರಂಭಕ್ಕೂ ಮುನ್ನ ನಡೆದ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲೂ ರಾಹುಲ್ ವೈಫಲ್ಯ ಅನುಭವಿಸಿದ್ದರು. ಇದೀಗ ಆಡಿದ ಎರಡೂ ಪಂದ್ಯಗಳಲ್ಲಿ ಕನ್ನಡಿಗನ ಪ್ರದರ್ಶನ ತೀರಾ ಕಳಪೆಯಾಗಿದೆ. ಹೀಗಾಗಿ ಕೆಎಲ್​ಗೆ ಅವಕಾಶ ಸಿಕ್ಕರೆ ಇಂದಿನ ಪಂದ್ಯ ಅಗ್ನಿಪರೀಕ್ಷೆ ಎನ್ನಬಹುದು.

ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗಲೇಬೇಕಿದೆ. ವೇಗಿಗಳ ಪೈಕಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಬಿಟ್ಟರೆ ಮತ್ಯಾರು ಮಾರಕ ದಾಳಿ ಸಂಘಟಿಸುತ್ತಿಲ್ಲ. ಅರ್ಶ್​​ದೀಪ್ ಸಿಂಗ್ ಹಾಗೂ ಆವೇಶ್ ಖಾನ್ ದುಬಾರಿಯಾಗುತ್ತಿದ್ದಾರೆ. ವಿಕೆಟ್ ಕೂಡ ಪಡೆದುಕೊಳ್ಳುತ್ತಿಲ್ಲ. ಯುಜ್ವೇಂದ್ರ ಚಹಲ್ ರನ್ ಹರಿ ಬಿಡದಿದ್ದರೂ ವಿಕೆಟ್ ಪಡೆಯಲು ವಿಫಲರಾಗುತ್ತಿದ್ದಾರೆ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಇತ್ತ ಪಾಕಿಸ್ತಾನ ಕಳೆದ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ಧ ಗೆದ್ದು ಭರ್ಜರಿ ಫಾರ್ಮ್​ಗೆ ಮರಳಿದೆ. ಬಾಬರ್ ಅಜಮ್ ಬ್ಯಾಟ್​ನಿಂದ ರನ್ ಬರುತ್ತಿಲ್ಲವಾದರೂ ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಕುಶ್ದಿಲ್ ಶಾ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬೌಲಿಂಗ್​ನಲ್ಲೂ ಪಾಕ್ ಮಾರಕವಾಗಿದೆ. ಹಾಂಗ್ ಕಾಂಗ್ ತಂಡವನ್ನು ಕೇವಲ 38 ರನ್​ಗೆ ಆಲೌಟ್ ಮಾಡಿತ್ತು. ನಸೀಂ ಶಾ, ಶದಬ್ ಖಾನ್ ಹಾಗೂ ಮೊಹಮ್ಮದ್ ನವಾಜ್ ಪ್ರಮುಖ ವಿಕೆಟ್ ಟೇಕರ್ ಬೌಲರ್​ಗಳಾಗಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ. ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಹಾಟ್‌ ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದ ಪಿಚ್‌ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟಿಂಗ್ ಸ್ವಲ್ಪ ಸುಲಭವಾಗುತ್ತದೆ. ಈ ಪಿಚ್​ನಲ್ಲಿ ನಿಧಾನಗತಿಯ ಬೌಲರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ ಇತಿಹಾಸವಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಪಾಕಿಸ್ತಾನ ತಂಡ: ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ನಸೀಮ್ ಶಾ, ಹಸನ್ ಅಲಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

Previous Post

AIMPLB vs BJP ಮದರಸಾ ಸಮೀಕ್ಷೆ ನಿಯಮ ಮಠದ ಮೇಲಿಲ್ಲ ಯಾಕೆ? ಮುಸ್ಲಿಂ ಲಾ ಬೋರ್ಡ್ ಪ್ರಶ್ನೆ!

Next Post

ಡ್ರಿಂಕ್ ಅಂಡ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು

Next Post
ಡ್ರಿಂಕ್ ಅಂಡ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು

ಡ್ರಿಂಕ್ ಅಂಡ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.