

ಮಂಗಳೂರು, ಸೆ.7;ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯ ನೆಪದಲ್ಲಿ ಎನ್.ಐ.ಎ.ಯನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ನೇತೃತ್ವದ ಸರಕಾರವು ಸಂಘಟನೆಯ ನಾಯಕರನ್ನು ಗುರಿಪಡಿಸುತ್ತಿದ್ದು, ಸರಕಾರ ಈ ಹಗೆತನದ ಕ್ರಮವನ್ನು ಅನುಸರಿಸುತ್ತಿದೆ ಎಂದು ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯ ದರ್ಶಿ ಎ.ಕೆ.ಅಶ್ರಫ್ ಸುದ್ದಿ ಗೋಷ್ಠಿಯಲ್ಲಿಂದು ಆರೋಪಿಸಿದ್ದಾರೆ.

ದ.ಕ.ಜಿಲ್ಲೆಯ ಸರಣಿ ಹತ್ಯೆ ಪ್ರಕರಣಗಳು ಸಹಿತ, ರಾಜ್ಯದಲ್ಲಿ
ಇತ್ತೀಚಿಗೆ ಹಲವು ಕೊಲೆ ಪ್ರಕರಣಗಳು ನಡೆದಿವೆ. ಶಿವಮೊಗ್ಗದ ರೌಡಿಶೀಟರ್ ಹರ್ಷ ಮತ್ತು ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ನೀಡಿದ ಮಹತ್ವವನ್ನು ಬಿಜೆಪಿ ಸರಕಾರವು ಬೆಳಗಾವಿಯ ಅರ್ಬಾಝ್, ಸಮೀರ್ ಶಹಾಪೂರ, ಸುಳ್ಯದ ಮಸೂದ್, ಸುರತ್ಕಲ್ ನ ಪಾಝಿಲ್ ಹತ್ಯೆಗೆ ನೀಡಿಲ್ಲ. ಹರ್ಷನ ಕೊಲೆ ಗ್ಯಾಂಗ್ ವಾರ್ಗೆ ಸಂಬಂಧಿಸಿದ್ದಾಗಿದೆ ಮತ್ತು ಪ್ರವೀಣ್ ಕೊಲೆ ಸ್ಥಳೀಯವಾಗಿ ಕೋಮು ವೈಷಮ್ಯದಿಂದ ನಡೆದ ಘಟನೆಯಾಗಿತ್ತು ಎಂಬುದನ್ನು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ ಪಡಿಸಿದ್ದಾರೆ. ಆದರೆ ರಾಜ್ಯದಲ್ಲಿ ಕೋಮು ವೈಷಮ್ಯದಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಸಮಾನವಾಗಿ ಪರಿಗಣಿಸಬೇಕಾಗಿದ್ದ ಬಿಜೆಪಿ ಸರಕಾರವು ಪಕ್ಷಪಾತದ ಧೋರಣೆಯನ್ನು ಅನುಸರಿಸುತ್ತಿದೆ. ಬಿಜೆಪಿ ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ಸ್ಥಳೀಯ ಪೊಲೀಸರ ಮೂಲಕ ತನಿಖೆ ನಡೆಸುವಾಗ, ಮುಸ್ಲಿಮ್ ಯುವಕರು ಆರೋಪಿಗಳಾಗಿರುವ ಪ್ರಕರಣಗಳನ್ನು ಮಾತ್ರ ಎನ್.ಐ.ಎಗೆ ವಹಿಸುತ್ತಿರುವುದು ಸಂಶಯಾಸ್ಪದ ವಾಗಿದೆ. ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಸಾಮಾನ್ಯ ಚೂರಿ ಇರಿತ ಘಟನೆಯ ಆರೋಪಿಗಳಾ ಗಿರುವ ಮುಸ್ಲಿಮ್ ಯುವಕರ ಮೇಲೂ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದು ಬಿಜೆಪಿ ಎನ್.ಐ.ಎಯಂತಹ ತನಿಖಾ ಸಂಸ್ಥೆಗಳನ್ನು ಯಾವ ರೀತಿ ದುರ್ಬಳಕೆ ಮಾಡುತ್ತಿದೆ ಎಂಬುದಕ್ಕೆ ನಿದರ್ಶನವಾ ಗಿದೆ. ಪ್ರವೀಣ್ ಕೊಲೆ ಘಟನೆಯ ಬಳಿಕ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ಗೊಂಡಿದ್ದರು. ಈ ಕಾರಣಕ್ಕಾಗಿ ಕಾರ್ಯಕರ್ತರ ಆಕ್ರೋಶವನ್ನು ತಣಿಸಲು ರಾಜ್ಯ ಸರಕಾರವು ಪ್ರವೀಣ್ ಕೊಲೆಯನ್ನು ಎನ್.ಐ.ಎ ತನಿಖೆ ವಹಿಸುವ ಮೂಲಕ ಪಾಪ್ಯುಲರ್ ಫ್ರೆಂಟ್ ವಿರುದ್ಧ ಪ್ರತೀಕಾ ರಾತ್ಮಕ ಕ್ರಮವನ್ನು ಕೈಗೊಂಡಿದೆ .ಈ ಬೆಳವಣಿಗೆಗಳ ನಂತರ ಎನ್.ಐ.ಎಯನ್ನು ದುರ್ಬಳಕೆ ಮಾಡಿಕೊಂಡು ಇದೀಗ ಮುಸ್ಲಿಮ್ ಸಂಘಟನೆಗಳ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿಗಳನ್ನು ನಡೆಸಲಾಗುತ್ತಿದೆ. ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಾಗಿ ಘನವೆತ್ತ ಸಾಂವಿಧಾನಿಕ ಸಂಸ್ಥೆಗಳನ್ನು ಈ ರೀತಿಯಲ್ಲಿ ದುರ್ಬಳಕೆ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಅಶ್ರಫ್ ಆರೋಪಿಸಿದ್ದಾರೆ.
ಬಿಜೆಪಿ ಸರಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ತನ್ನ ಬದ್ಧ ಸೈದ್ಧಾಂತಿಕ ವಿರೋಧಿಯಾಗಿರುವ ಪಾಪ್ಯುಲರ್ ಫ್ರೆಂಟ್ ವಿರುದ್ಧ ವ್ಯಾಪಕ ಅಪಪ್ರಚಾರಗಳನ್ನು ನಡೆಸುತ್ತಾ ಬರುತ್ತಿದೆ. ಮಾತ್ರವಲ್ಲ, ಸಂದರ್ಭಕ್ಕೆ ಅನುಸಾರವಾಗಿ ಈಡಿ, ಎನ್.ಐ.ಎ ಮೊದಲಾದ ತನಿಖಾ ಏಜೆನ್ಸಿಗಳನ್ನು ನಿರಂತರವಾಗಿ ಭೂ ಬಿಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದರ ವಿರುದ್ಧ ಪಿಎಫ್ಐ ಪ್ರಜಾಸತ್ತಾತ್ಮಕ ಕಾನೂನು ಗಳ ಮೂಲಕ ಹೋರಾಟ ಮುಂದುವರಿಸಲಿದೆ ಎಂದು ಅಶ್ರಫ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಪಿಎಫ್ಐ ದ.ಕ.ಜಿಲ್ಲಾ ಧ್ಯಕ್ಷ್ ಇಝಾಸ್ ಅಹ್ಮದ್, ಮಂಗಳೂರು ನಗರಾಧ್ಯಕ್ಷ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.