Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Rupee Vs Dollar: ಡಾಲರ್ ಎದುರು ಮತ್ತೆ ಮಂಡಿಯೂರಿದ ರೂಪಾಯಿ; ಸಾರ್ವಕಾಲಿಕ ಕನಿಷ್ಠ ಮಟ್ಟ 81.09ಕ್ಕೆ ಇಳಿಕೆ

editor tv by editor tv
September 23, 2022
in ರಾಷ್ಟ್ರೀಯ, ಸುದ್ದಿ
0
Rupee Vs Dollar: ಡಾಲರ್ ಎದುರು ಮತ್ತೆ ಮಂಡಿಯೂರಿದ ರೂಪಾಯಿ; ಸಾರ್ವಕಾಲಿಕ ಕನಿಷ್ಠ ಮಟ್ಟ 81.09ಕ್ಕೆ ಇಳಿಕೆ
1.9k
VIEWS
Share on FacebookShare on TwitterShare on Whatsapp

ಮುಂಬೈ (ಸೆ.23):  ಡಾಲರ್ ಎದುರು ರೂಪಾಯಿ ಮೌಲ್ಯ ಇನ್ನೊಮ್ಮೆ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದು, ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 81.09 ತಲುಪಿದೆ. ಅಮೆರಿಕದ ಟ್ರೆಷರ್ ಯೀಲ್ಡ್  ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿರುವ ಜೊತೆಗೆ ಆಮದುದಾರರಿಂದ ಡಾಲರ್ ಗೆ ಬೇಡಿಕೆ ಹೆಚ್ಚಳವಾಗಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಕರೆನ್ಸಿಯ ಬಲ, ದೇಶೀಯ ಷೇರುಗಳಲ್ಲಿನ ನಕಾರಾತ್ಮಕ ಪ್ರವೃತ್ತಿ ಕೂಡ ಈ ಬೆಳವಣಿಗೆಗೆ ಕಾರಣವಾಗಿರುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗಿದೆ. ನಿನ್ನೆ (ಗುರುವಾರ) ಕೂಡ ಡಾಲರ್ ಮೌಲ್ಯ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟ 81 ರೂ.ಗೆ ಕುಸಿತ ಕಂಡಿತ್ತು. ಅಮೆರಿಕದ ಕೇಂದ್ರ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರವನ್ನು ಶೇ.0.75ರಷ್ಟು ಹೆಚ್ಚಿಸಿದೆ. ಇದ್ರಿಂದ ಒಟ್ಟು ಬಡ್ಡಿದರ ಶೇ.3.25ಗೆ ಹೆಚ್ಚಳವಾಗಿದೆ.  ಇದ್ರಿಂದ ಹೂಡಿಕೆದಾರರಿಗೆ ಹೂಡಿಕೆ ಮೇಲಿನ ಆಸಕ್ತಿ ತಗ್ಗಿದೆ. ಅಮೆರಿಕ ಡಾಲರ್ ಮೌಲ್ಯ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.ನಿನ್ನೆಯ ಬೆಳವಣಿಗೆ ಇಂದು ಕೂಡ ಮುಂದುವರಿದಿದ್ದು, ಡಾಲರ್ ಎದುರು ರೂಪಾಯಿ  81.09ಕ್ಕೆ ಕುಸಿತ ಕಂಡಿದೆ.

ಗುರುವಾರ ಭಾರತೀಯ ಕರೆನ್ಸಿ ಕಳೆದ ಆರು ತಿಂಗಳಲ್ಲೇ ಒಂದು ದಿನದಲ್ಲಿ ಭಾರೀ ಕುಸಿತ ದಾಖಲಿಸಿದೆ. ಏಷ್ಯಾದ ಇತರ ರಾಷ್ಟ್ರಗಳ ಕರೆನ್ಸಿಗಳಿಗೆ ಹೋಲಿಸಿದ್ರೆ ರೂಪಾಯಿ ಗುರುವಾರ ಹೆಚ್ಚಿನ ಆಘಾತ ಅನುಭವಿಸಿದೆ. 10 ವರ್ಷಗಳ ಅವಧಿಯ ಅಮೆರಿಕದ ಟ್ರೆಷರ್ ಯೀಲ್ಡ್ ಒಂದೇ ರಾತ್ರಿಯಲ್ಲಿ ಶೇ.3.70ಕ್ಕೆ ಏರಿಕೆ ಕಂಡಿದೆ. ಇನ್ನು ಎರಡು ವರ್ಷಗಳ ಯೀಲ್ಡ್ ಶೇ. 4.16ಕ್ಕೆ ಹೆಚ್ಚಳವಾಗಿದೆ. ಬಾಂಡ್ ಮಾರುಕಟ್ಟೆಯಲ್ಲಿನ ಇತ್ತೀಚೆಗೆ ಮಾರಾಟ ಹೆಚ್ಚುತ್ತಿದೆ. ಈ ವರ್ಷದ ಅಂತ್ಯದೊಳಗೆ ಯೀಲ್ಡ್ ದರ ಶೇ.4.4 ತಲುಪುವ ನಿರೀಕ್ಷೆಯಿದೆ. ಇನ್ನು 2022ರಲ್ಲಿ ಬಾಕಿಯಿರುವ ಫೆಡರಲ್ ರಿಸರ್ವ್ ಎರಡು ಸಭೆಗಳಲ್ಲಿ ಬಡ್ಡಿದರವನ್ನು 125 ಬೇಸಿಸ್ ಪಾಯಿಂಟ್ಸ್ ಹೆಚ್ಚಳ ಮಾಡುವ ಸಾಧ್ಯತೆಯಿದೆ.

ಬೆಲೆ ಏರಿಕೆ ಸಾಧ್ಯತೆ?ಭಾರತದಲ್ಲಿ ಆಗಸ್ಟ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆಯಾಗಿದೆ. ಈಗಾಗಲೇ ಅಕ್ಕಿ, ತರಕಾರಿಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಹೀಗಿರುವಾಗ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದಿಂದ ಕಚ್ಚಾ ತೈಲ ಆಮದು ದುಬಾರಿಯಾಗಲಿದೆ. ಇದು ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆಗೆ ಕಾರಣವಾಗಬಹುದು. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆ ಅಗತ್ಯ ವಸ್ತುಗಳ ಸಾಗಣೆ ವೆಚ್ಚ ಹೆಚ್ಚಿಸುವ ಕಾರಣ ಸಹಜವಾಗಿ ಅವುಗಳ ಬೆಲೆಯಲ್ಲಿ ಕೂಡ ಏರಿಕೆಯಾಗಲಿದೆ. ಇನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ಉಪಕರಣಗಳು, ಚಿನ್ನ ಹಾಗೂ ಇತರ ವಸ್ತುಗಳ ಬೆಲೆಯಲ್ಲಿ ಕೂಡ ಏರಿಕೆಯಾಗಲಿದೆ. ಈಗಾಗಲೇ ಭಾರತದಲ್ಲಿ ಹಣದುಬ್ಬರ ಆರ್ ಬಿಐ ಸಹನ ಮಿತಿಯನ್ನು ಮೀರಿದೆ. ಹೀಗಿರುವಾಗ ಆಮದು ವೆಚ್ಚ ಹೆಚ್ಚಳ ಅಗತ್ಯ ವಸ್ತುಗಳ ಬೆಲೆಯಲ್ಲಿ ಇನ್ನಷ್ಟು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಜೇಬಿನ ಮೇಲಿನ ಹೊರೆಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಯಿದೆ. 

Previous Post

KSRTC Dasara Package Tour ಮಂಗಳೂರು ದಸರಾ ದರ್ಶನಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ಯಾಕೇಜ್ ಟೂರ್

Next Post

ಭಯೋತ್ಪದನೆ ಆರೋಪದಲ್ಲಿ ಬಂಧನವಾಗಿದ್ದ ಮಾಜ್​​​ ನ ತಂದೆ ಹೃದಯಾಘಾತದಿಂದ ಸಾವು

Next Post
ಭಯೋತ್ಪದನೆ ಆರೋಪದಲ್ಲಿ ಬಂಧನವಾಗಿದ್ದ ಮಾಜ್​​​ ನ ತಂದೆ ಹೃದಯಾಘಾತದಿಂದ ಸಾವು

ಭಯೋತ್ಪದನೆ ಆರೋಪದಲ್ಲಿ ಬಂಧನವಾಗಿದ್ದ ಮಾಜ್​​​ ನ ತಂದೆ ಹೃದಯಾಘಾತದಿಂದ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.