Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Bharat Jodo Yatra: ಕರ್ನಾಟಕದಲ್ಲಿ ಇಂದಿನಿಂದ ಭಾರತ ಐಕ್ಯತಾ ಯಾತ್ರೆ, ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಪ್ರವೇಶ

editor tv by editor tv
September 30, 2022
in ರಾಜ್ಯ, ಸುದ್ದಿ
0
Bharat Jodo Yatra: ಕರ್ನಾಟಕದಲ್ಲಿ ಇಂದಿನಿಂದ ಭಾರತ ಐಕ್ಯತಾ ಯಾತ್ರೆ, ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಪ್ರವೇಶ
1.9k
VIEWS
Share on FacebookShare on TwitterShare on Whatsapp

ಚಾಮರಾಜನಗರ / ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ‘ಭಾರತ್ ಜೋಡೋ ಯಾತ್ರಾ’ (Bharat Jodo Yatra) ಇಂದಿನಿಂದ ಕರ್ನಾಟಕದಲ್ಲಿ ಸದ್ದು ಮಾಡಲಿದೆ. ಇದನ್ನು ಕನ್ನಡದಲ್ಲಿ ‘ಭಾರತ ಐಕ್ಯತಾ ಯಾತ್ರೆ’ ಎಂದು ಕಾಂಗ್ರೆಸ್ ಅನುವಾದಿಸಿ, ಪ್ರಚಾರ ಮಾಡುತ್ತಿದೆ. ಕಾಂಗ್ರೆಸ್​ಗೆ ಪೂರಕ ವಾತಾವರಣವಿರುವ ದೇಶದ ಕೆಲವೇ ರಾಜ್ಯಗಳ ಪೈಕಿ ಒಂದಾಗಿರುವ ಕರ್ನಾಟಕದಲ್ಲಿ ಈ ಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಿಷ್ಠವಾಗಬಹುದು ಎಂದು ಪಕ್ಷದ ನಾಯಕರು ಉತ್ಸಾಹ ತೋರಿಸುತ್ತಿದ್ದಾರೆ. ಗುಂಡ್ಲುಪೇಟೆ (Gundlupete) ತಾಲ್ಲೂಕಿನಲ್ಲಿ ಕರ್ನಾಟಕ ಪ್ರವೇಶಿಸಲಿರುವ ಯಾತ್ರೆಯು, ಕರ್ನಾಟಕದಲ್ಲಿ 22 ದಿನ ಸಂಚರಿಸಲಿದ್ದು, 511 ಕಿಮೀ ಕ್ರಮಿಸಲಿದೆ.

ಕನ್ಯಾಕುಮಾರಿಯಿಂದ ಸಂಚಾರ ಆರಂಭಿಸಿರುವ ರಾಹುಲ್ ಗಾಂಧಿ ಬೆಳಿಗ್ಗೆ 9 ಗಂಟೆಗೆ ತಮಿಳುನಾಡಿನ ಗೂಡಲೂರಿನಿಂದ ಕರ್ನಾಟಕ ಪ್ರವೇಸಿಸಲಿದ್ದಾರೆ. ಊಟಿ ಕ್ಯಾಲಿಕಟ್ ಜಂಕ್ಷನ್ ಬಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಹಲವು ಶಾಸಕರು, ಪರಿಷತ್ ಸದಸ್ಯರು ಸ್ವಾಗತ ಕೋರಲಿದ್ದಾರೆ. ನಂತರ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು 250 ಗಣ್ಯರು ಪಾಲ್ಗೊಳ್ಳಲುವ ಸಾಧ್ಯತೆಯಿದೆ. ಸ್ವಾಗತದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ, ಅನಂತರ ಭಾರತ್ ಜೋಡೋ ಯಾತ್ರೆಯ ಸಂಚಾರ ಆರಂಭವಾಗಲಿದೆ.

ಜೋಡಿಸುವುದು ಅಥವಾ ಕಟ್ಟುವುದು ಎಂಬ ಪ್ರಕ್ರಿಯೆಗಳಿಗೆ ಶ್ರದ್ಧೆ, ಶ್ರಮ, ತ್ಯಾಗ, ತಾಳ್ಮೆ ಎಲ್ಲವೂ ಬೇಕಾಗುತ್ತದೆ.
ಅವೆಲ್ಲವುಗಳೊಂದಿಗೆ #BharatJodoYathra ಸಾಗುತ್ತಿದೆ.@RahulGandhi ಅವರ ನೇತೃತ್ವದ
ಈ ಐತಿಹಾಸಿಕ ಯಾತ್ರೆಯನ್ನು ಸ್ವಾಗತಿಸಲು ಸಕಲ ರೀತಿಯಲ್ಲೂ ಕರುನಾಡು ಸಜ್ಜಾಗಿದೆ.

ಬನ್ನಿ, ಸದೃಢ, ಸಂಪನ್ನ ಭಾರತಕ್ಕಾಗಿ ಹೆಜ್ಜೆ ಹಾಕೋಣ. pic.twitter.com/kD4RrAVD9Z

— Karnataka Congress (@INCKarnataka) September 29, 2022

ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಸುಮಾರು ನಾಲ್ಕು ಕಿಮೀ ಸಂಚರಿಸಲಿರುವ ಪಾದಯಾತ್ರಿಗಳು ಗುಂಡ್ಲುಪೇಟೆ ತಾಲ್ಲೂಕು ವೀರನಪುರ ಕ್ರಾಸ್ ಬಳಿ ಮಧ್ಯಾಹ್ನದ ಊಟಕ್ಕೆ ನಿಲ್ಲಲಿದ್ದಾರೆ. ಬಳಿಕ ಆದಿವಾಸಿಗಳು ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಡಕಳ್ಳಿ ಗೇಟ್​​ನಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದ್ದು, 7 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮ ತಲುಪಲಿದೆ. ಅಲ್ಲಿ ಕರ್ನಾಟಕದ ಮೊದಲ ದಿನದ ಪಾದಯಾತ್ರೆ ಮುಕ್ತಾಯವಾಗುತ್ತದೆ.

ಇಂದಿನ ಪಾದಯಾತ್ರೆಯಲ್ಲಿ ಬೆಂಗಳೂರು ದಕ್ಷಿಣ, ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು, ನಾಯಕರು, ಕಾರ್ಯಕರ್ತರು, ಭಾಗಿಯಾಗಲಿದ್ದಾರೆ. 7 ಕ್ಷೇತ್ರಗಳಿಂದ ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Previous Post

ನೆಹರು, ಇಂದಿರಾ, ಸೋನಿಯಾ ಪ್ರಯತ್ನಿಸಿದ್ರೂ RSS ನ ಒಂದು ಕೂದಲು ಅಲ್ಲಾಡಿಸಲಾಗಿಲ್ಲ: ಈಶ್ವರಪ್ಪ

Next Post

ಬೆಳ್ಳಂಬೆಳಗ್ಗೆ ರಾಜ್ಯದ 9 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ- ಕಡತಗಳ ಪರಿಶೀಲನೆ

Next Post
ಬೆಳ್ಳಂಬೆಳಗ್ಗೆ ರಾಜ್ಯದ 9 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ- ಕಡತಗಳ ಪರಿಶೀಲನೆ

ಬೆಳ್ಳಂಬೆಳಗ್ಗೆ ರಾಜ್ಯದ 9 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ- ಕಡತಗಳ ಪರಿಶೀಲನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.