Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

editor tv by editor tv
October 15, 2022
in ರಾಷ್ಟ್ರೀಯ, ಸುದ್ದಿ
0
ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ
1.9k
VIEWS
Share on FacebookShare on TwitterShare on Whatsapp

ಭಾರತೀಯ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತದಷ್ಟು ನಾಯಕತ್ವದ ಸ್ಥಾನಗಳನ್ನು ಮೇಲ್ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ. ಒಬ್ಬನೇ ಒಬ್ಬ ದಲಿತ ಅಥವಾ ಆದಿವಾಸಿಯು ಭಾರತೀಯ ಮುಖ್ಯವಾಹಿನಿ ಮಾಧ್ಯಮವನ್ನು ಮುನ್ನಡೆಸುತ್ತಿಲ್ಲ ಎಂದು ಹೊಸ ವರದಿಯೊಂದು ಬಹಿರಂಗಪಡಿಸಿದೆ.

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.

ವರದಿಯ ಎರಡನೇ ಆವೃತ್ತಿ ಹಲವಾರು ಕಟು ಸತ್ಯಗಳನ್ನು ಹೊರಗೆಳೆದಿದೆ. ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಮಾಧ್ಯಮ ಸಂಸ್ಥೆಗಳು ತಕ್ಷಣವೇ ನೇಮಕಾತಿ ರೀತಿಯಲ್ಲಿ ಗಮನಾರ್ಹವಾದ ಕೂಲಂಕಷ ಪರೀಕ್ಷೆಯನ್ನು ನಡೆಸಿಕೊಳ್ಳಬೇಕಿದೆ. ದೇಶಾದ್ಯಂತ ಸುದ್ದಿಮನೆಗಳು ಹೆಚ್ಚು ವೈವಿಧ್ಯಮಯವಾಗಿ, ಎಲ್ಲರನ್ನೂ ಒಳಗೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ತಾರತಮ್ಯ ಮತ್ತು ಅನ್ಯಾಯವಿಲ್ಲದೆ ಭಾರತವನ್ನು ಕಟ್ಟಲು ಇದು ಅಗತ್ಯವಾಗಿದೆ” ಎಂದಿದ್ದಾರೆ ಬೆಹರ್‌.

ವರದಿಯು ಸುಮಾರು 43 ಭಾರತೀಯ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು, ಅವುಗಳ ಕವರೇಜ್, ನಾಯಕತ್ವದ ಸಾಮಾಜಿಕ ಸ್ಥಾನಮಾನವನ್ನು, ಸಂಸ್ಥೆಗಳಿಂದ ನೇಮಕಗೊಂಡ ಪತ್ರಕರ್ತರ ಜಾತಿ ಹಿನ್ನೆಲೆಯನ್ನು ಅಧ್ಯಯನ ಮಾಡಿದೆ.

ಏಪ್ರಿಲ್ 2021 ಮತ್ತು ಮಾರ್ಚ್ 2022ರ ನಡುವೆ ನಡೆಸಲಾದ ಸಂಶೋಧನೆಯು ನಿಯತಕಾಲಿಕೆ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ 20,000ಕ್ಕೂ ಹೆಚ್ಚು ಲೇಖನಗಳನ್ನು, 76 ಆಂಕರ್‌ಗಳು ಮತ್ತು 3,318 ಪ್ಯಾನೆಲಿಸ್ಟ್‌ಗಳ 2,075 ಪ್ರೈಮ್-ಟೈಮ್ ಚರ್ಚೆಗಳನ್ನು, 12 ತಿಂಗಳ ಆನ್‌ಲೈನ್ ಸುದ್ದಿ ವರದಿಗಳನ್ನು ವಿಶ್ಲೇಷಣೆ ಮಾಡಿದೆ.

Previous Post

ನಮ್ ಮಕ್ಳು ಹಿಜಾಬ್ ಹಾಕ್ತಾರೆ ನೀವು ಬಿಕಿನಿ ಹಾಕ್ಕೊಳ್ಳಿ, ಬಿಜೆಪಿ ವಿರುದ್ಧ ಓವೈಸಿ ವಾಗ್ದಾಳಿ!

Next Post

Fake WhatsApp: ಬಳಕೆದಾರರ ಡೇಟಾ ಕದಿಯುವ ಫೇಕ್ ವಾಟ್ಸ್​ಆ್ಯಪ್ ಪತ್ತೆ: ಎಚ್ಚರದಿಂದ ಇರಲು ಸೂಚನೆ

Next Post
Fake WhatsApp: ಬಳಕೆದಾರರ ಡೇಟಾ ಕದಿಯುವ ಫೇಕ್ ವಾಟ್ಸ್​ಆ್ಯಪ್ ಪತ್ತೆ: ಎಚ್ಚರದಿಂದ ಇರಲು ಸೂಚನೆ

Fake WhatsApp: ಬಳಕೆದಾರರ ಡೇಟಾ ಕದಿಯುವ ಫೇಕ್ ವಾಟ್ಸ್​ಆ್ಯಪ್ ಪತ್ತೆ: ಎಚ್ಚರದಿಂದ ಇರಲು ಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.