Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಲ್ಲವರಿಗೆ ಮೀಸಲಾತಿ ನೀಡಿ – ಬೃಹತ್ ಹಕ್ಕೋತ್ತಾಯ

editor tv by editor tv
November 4, 2022
in ರಾಜ್ಯ, ಸುದ್ದಿ
0
ಬಿಲ್ಲವರಿಗೆ ಮೀಸಲಾತಿ ನೀಡಿ – ಬೃಹತ್ ಹಕ್ಕೋತ್ತಾಯ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ರಾಜ್ಯದಲ್ಲಿ ಈಗ ಮೀಸಲಾತಿ ವಿಚಾರವೇ ಹೆಚ್ಚು ಚರ್ಚೆಯಲ್ಲಿದೆ. ಇದೀಗ ಈಡಿಗ-ಬಿಲ್ಲವ (Billava) ಸಮುದಾಯವನ್ನು ಪ್ರವರ್ಗ 1ರಡಿ ಸೇರ್ಪಡೆಗೆ ಹಕ್ಕೊತ್ತಾಯ ಕೇಳಿ ಬಂದಿದೆ. ಕರಾವಳಿಯಲ್ಲಿ ನಿರ್ಣಾಯಕ ಮತದಾರರಾಗಿರುವ ಬಿಲ್ಲವ ಸಮುದಾಯ ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ನಡುವೆ ಸಮುದಾಯದ ಸ್ವಾಮೀಜಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಪಾದಯಾತ್ರೆಗೂ (Padayatra) ತಯಾರಿ ಮಾಡಿಕೊಂಡಿದ್ದಾರೆ.

ಕರಾವಳಿಯಲ್ಲಿ (Karavli) ಮೀಸಲಾತಿ ಹೆಸರಲ್ಲಿ ಬಿಲ್ಲವರು ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣೆ ಹೊತ್ತಲ್ಲೇ ಬಿಜೆಪಿ (BJP) ಸರ್ಕಾರದ ವಿರುದ್ಧ ತೊಡೆ ತಟ್ಟಲು ಈಡಿಗ-ಬಿಲ್ಲವ ಸಮುದಾಯ ಸಜ್ಜಾಗಿದ್ದು ಜನವರಿ ಅಂತ್ಯದಲ್ಲಿ ಬೃಹತ್ ಸಮಾವೇಶವನ್ನು ನಡೆಸುವುದಕ್ಕೆ ನಿರ್ಧರಿಸಿದೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಸಭೆ ಸೇರಿದ ಬಿಲ್ಲವ ಮುಖಂಡರು ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ದಕ್ಷಿಣಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿರ್ಣಾಯಕವಾಗಿರೋ ಬಿಲ್ಲವ ವೋಟ್ (Vote) ಬ್ಯಾಂಕ್ ಹಲವು ಬೇಡಿಕೆಗಳನ್ನು ಮುಂದಿಟ್ಟು ಈ ಸಮಾವೇಶ ನಡೆಸುತ್ತಿದೆ. ರಾಜ್ಯದಲ್ಲಿ ಸುಮಾರು 75 ಲಕ್ಷದಷ್ಟಿರೋ ಈಡಿಗ-ಬಿಲ್ಲವ ಸಮುದಾಯ ಸುಮಾರು 26 ಪಂಗಡಗಳನ್ನು ಹೊಂದಿದೆ. ಸದ್ಯ ಪ್ರವರ್ಗ 2ಎ (2A) ಅಡಿ ಸೇರಿರೋ ಬಿಲ್ಲವ-ಈಡಿಗ ಸಮುದಾಯ ಪ್ರವರ್ಗ 1ರಡಿ ಸೇರ್ಪಡೆಗೆ ಹಕ್ಕೊತ್ತಾಯ ಮಾಡಿದೆ. ಇದರ ಜೊತೆ ನಾರಾಯಣ ಗುರು ಅಭಿವೃದ್ದಿ ನಿಗಮ ಸ್ಥಾಪಿಸಬೇಕು, ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಒತ್ತಾಯವು ಇದೆ.

ಈ ನಡುವೆ ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ ಕಲಬುರಗಿಯ ಪ್ರಣಾವಾನಂದ ಸ್ವಾಮೀಜಿ (Pranavananda Swamiji) ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ವರೆಗೆ ಸುಮಾರು 658 ಕಿ.ಮೀ ದೂರದ ಪಾದಯಾತ್ರೆಯನ್ನು ನಡೆಸಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಜನವರಿ 6 ರಂದು ಈ ಪಾದಯಾತ್ರೆ ಆರಂಭವಾಗಲಿದ್ದು, ಒಟ್ಟು 35 ದಿನಗಳ ಕಾಲ ಈ ಪಾದಯಾತ್ರೆ ಸಾಗಲಿದೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 500 ಕೋಟಿ ರೂ. ಅನುದಾನ ಮೀಸಲಿರಿಸಿ ನಾರಾಯಣ ಗುರು ಅಭಿವೃದ್ದಿ ನಿಗಮ ಸ್ಥಾಪಿಸಬೇಕು. ಈಡಿಗ-ಬಿಲ್ಲವ ಸಮುದಾಯವನ್ನು ಪ್ರವರ್ಗ 1 ರಡಿ ಸೇರ್ಪಡೆಗೊಳಿಸಬೇಕು. ಚುನಾವಣೆ ಹೊತ್ತಲ್ಲಿ ಟಿಕೆಟ್ ನೀಡುವಲ್ಲಿ ಬಿಲ್ಲವರ ಕಡೆಗಣನೆ ಮಾಡುತಿದ್ದು ಹೀಗಾಗಿ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬುದು ಈ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ನಾರಾಯಣ ಗುರು ಟ್ಯಾಬ್ಲೋ, ಪಠ್ಯ ಪುಸ್ತಕ ವಿವಾದದ ಬಳಿಕ ಕರಾವಳಿಯ ಪ್ರಬಲ ಬಿಲ್ಲವ ಸಮುದಾಯದ ಆಕ್ರೋಶಕ್ಕೆ ಬಿಜೆಪಿ ತುತ್ತಾಗಿತ್ತು. ಇದೀಗ ಕಳೆದ ಆರು ವರ್ಷಗಳ ಮಹಾ ಬೇಡಿಕೆಗೆ ಚುನಾವಣೆ ಹೊತ್ತಲ್ಲೇ ಮರುಜೀವ ಬಂದಿದ್ದು, ಬಿಜೆಪಿ ಇದನ್ನು ಹೇಗೆ ನಿಭಾಯಿಸುತ್ತೆ ಎಂದು ಕಾದುನೋಡಬೇಕಿದೆ.

Previous Post

ಎಸ್ಡಿಪಿಐ ಕಾಪು ಕ್ಷೇತ್ರದ ನೂತನ ಕಾಛೇರಿ ಉದ್ಘಾಟನೆ

Next Post

Tumkur: ಆಸ್ಪತ್ರೆಯಲ್ಲಿನ ಅಮಾನುಷ ವರ್ತನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ: ಆರೋಗ್ಯ ಸಚಿವ

Next Post
Tumkur: ಆಸ್ಪತ್ರೆಯಲ್ಲಿನ ಅಮಾನುಷ ವರ್ತನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ: ಆರೋಗ್ಯ ಸಚಿವ

Tumkur: ಆಸ್ಪತ್ರೆಯಲ್ಲಿನ ಅಮಾನುಷ ವರ್ತನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ: ಆರೋಗ್ಯ ಸಚಿವ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.