Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Pele Passed Away: ಫುಟ್ಬಾಲ್‌ ದಂತಕಥೆ ಬ್ರೆಜಿಲ್‌ನ ಪೀಲೆ ಇನ್ನಿಲ್ಲ

editor tv by editor tv
December 30, 2022
in ವಿದೇಶ, ಸುದ್ದಿ
0
Pele Passed Away: ಫುಟ್ಬಾಲ್‌ ದಂತಕಥೆ ಬ್ರೆಜಿಲ್‌ನ ಪೀಲೆ ಇನ್ನಿಲ್ಲ
1.9k
VIEWS
Share on FacebookShare on TwitterShare on Whatsapp

ಬ್ರೆಸಿಲಿಯಾ (ಡಿ.30): ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ, ಬ್ರೆಜಿಲ್‌ಗೆ 3 ವಿಶ್ವಕಪ್‌ಗಳನ್ನು ತಂದುಕೊಟ್ಟಿದ್ದ ಖ್ಯಾತ ಆಟಗಾರ ಪೀಲೆ (82) ಅನಾರೋಗ್ಯ ಕಾರಣದಿಂದ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೀಲೆ ಅವರು 2021ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಹಲವು ಕಾಯಿಲೆಗಳ ಕಾರಣದಿಂದಾಗಿ ಅವರನ್ನು ನ.29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಫುಟ್‌ಬಾಲ್‌ ಇತಿಹಾಸದಲ್ಲಿ ಉತ್ತಮ ಆಟಕ್ಕೆ ಹೆಸರಾಗಿದ್ದ ಪೀಲೆ ಬ್ರೆಜಿಲಿಯಾ ಫುಟ್‌ಬಾಲ್‌ ಕ್ಲಬ್‌ ಸ್ಯಾಂಟೋಸ್‌ ಮತ್ತು ಬ್ರೆಜಿಲ್‌ ರಾಷ್ಟ್ರೀಯ ತಂಡದೊಂದಿಗೆ ಸುಮಾರು 2 ದಶಕಗಳ ಕಾಲ ಆಡಿ ಅಭಿಮಾನಿಗಳನ್ನು ಮೋಡಿ ಮಾಡಿದ್ದರು. ಮೈದಾನದಲ್ಲಿ ತಮ್ಮ ವೇಗದ ಮತ್ತು ಚಾಕಚಕ್ಯತೆಯ ಚಲನೆ ಮೂಲಕ ಎದುರಾಳಿ ಆಟಗಾರರನ್ನು ಸಹ ಬೆರಗುಗೊಳಿಸಿದ್ದರು.

ಪೀಲೆ ಆಡಿರುವ 650 ಲೀಗ್‌, 1,281 ಸೀನಿಯರ್‌ ಪಂದ್ಯಗಳ ಕಾರಣದಿಂದಾಗಿ ಫುಟ್‌ಬಾಲ್‌ ಇತಿಹಾಸದಲ್ಲಿ ‘ಕಿಂಗ್‌’ ಎಂಬ ಹೆಸರನ್ನು ಗಳಿಸಿಕೊಂಡಿದ್ದರು. ತಮ್ಮ 17ನೇ ವಯಸ್ಸಿನಲ್ಲೇ 1958ರಲ್ಲಿ ಸ್ವೀಡನ್‌ನಲ್ಲಿ ನಡೆದ ಫುಟ್‌ಬಾಲ್‌ ವಿಶ್ವಕಪ್‌ಗೆ ಪದಾರ್ಪಣೆ ಮಾಡಿದ್ದರು.

1997ರಲ್ಲಿ ಪೀಲೆ ಬ್ರಿಟನ್‌ ರಾಣಿಯಿಂದ ಪ್ರತಿಷ್ಠಿತ ‘ನೈಟ್‌’ ಪದವಿಗೆ ಭಾಜನರಾದರು. ಒಟ್ಟು 92 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಪೀಲೆ 77 ಗೋಲುಗಳನ್ನು ಗಳಿಸಿದ್ದಾರೆ. ಎಲ್ಲಾ ಕ್ಲಬ್‌ಗಳು ಸೇರಿದಂತೆ ಒಟ್ಟು 840 ಪಂದ್ಯಗಳನ್ನು ಆಡಿರುವ ಪೀಲೆ 775 ಗೋಲು ಬಾರಿಸಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಬಾರಿ ಹ್ಯಾಟ್ರಿಕ್‌ ಗೋಲುಗಳನ್ನು ಗಳಿಸಿರುವ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಪೀಲೆ ನಿಧನಕ್ಕೆ ಜಗತ್ತಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

ವಿಶ್ವಕಪ್‌ ಗೆಲುವು: ಪೀಲೆ ಅವರು 1958, 1962 ಹಾಗೂ 1972ರಲ್ಲಿ ಬ್ರೆಜಿಲ್‌ಗೆ ಫುಟ್‌ಬಾಲ್‌ ವಿಶ್ವಕಪ್‌ ತಂದುಕೊಟ್ಟಿದ್ದರು. ಮೂರು ವಿಶ್ವಕಪ್‌ ಗೆದ್ದ ಏಕೈಕ ಆಟಗಾರ ಎಂಬ ದಾಖಲೆ ಇವತ್ತಿಗೂ ಅವರ ಹೆಸರಿನಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಮೂತ್ರಪಿಂಡ ಹಾಗೂ ಪ್ರಾಸ್ಟೇಟ್‌ ಸಮಸ್ಯೆಯಿಂದ ಬಳಲುತ್ತಿದ್ದರು. 2021ರ ಸೆಪ್ಟೆಂಬರ್‌ನಲ್ಲಿ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 2022ರ ನವೆಂಬರ್‌ನಲ್ಲಿ ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

1958ರಲ್ಲಿ ಸ್ವೀಡನ್‌ನಲ್ಲಿ ನಡೆದ ಫುಟ್‌ಬಾಲ್‌ ವಿಶ್ವಕಪ್‌ನಲ್ಲಿ ತಮ್ಮ 17ನೇ ವಯಸ್ಸಿನಲ್ಲೇ ಪೀಲೆ ಅವರು ಗೋಲ್‌ ಬಾರಿಸಿದ್ದರು. ತನ್ಮೂಲಕ ಬ್ರೆಜಿಲ್‌ ವಿಶ್ವಕಪ್‌ ಗೆಲ್ಲಲು ನೆರವಾಗಿದ್ದರು. ಪೀಲೆ ಅವರ ಅಂತ್ಯಕ್ರಿಯೆ ಯಾವಾಗ ನಡೆಯಲಿದೆ ಎಂಬ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Previous Post

Heeraben Modi Death: ತಾಯಿ ಹೀರಾಬೆನ್ ನಿಧನ, ಪ್ರಧಾನಿ ಮೋದಿ ಭಾವುಕ ಟ್ವೀಟ್

Next Post

Jaleel Murder Case: ಸಂಘ ಪರಿವಾರದ ಕೇಸರಿ ಉಗ್ರರಿಂದ ಮುಸ್ಲಿಂ ಹಾಗೂ ದಲಿತರ ಹತ್ಯೆ ಆಗುತ್ತಿದೆ: ಇಲ್ಯಾಸ್ ಮಹಮ್ಮದ್ ತುಂಬೆ

Next Post
Jaleel Murder Case: ಸಂಘ ಪರಿವಾರದ ಕೇಸರಿ ಉಗ್ರರಿಂದ ಮುಸ್ಲಿಂ ಹಾಗೂ ದಲಿತರ ಹತ್ಯೆ ಆಗುತ್ತಿದೆ: ಇಲ್ಯಾಸ್ ಮಹಮ್ಮದ್ ತುಂಬೆ

Jaleel Murder Case: ಸಂಘ ಪರಿವಾರದ ಕೇಸರಿ ಉಗ್ರರಿಂದ ಮುಸ್ಲಿಂ ಹಾಗೂ ದಲಿತರ ಹತ್ಯೆ ಆಗುತ್ತಿದೆ: ಇಲ್ಯಾಸ್ ಮಹಮ್ಮದ್ ತುಂಬೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.