Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ತುಳು ಅಧಿಕೃತ ಭಾಷೆ ವಿಚಾರ: ಸಚಿವ ಸುನೀಲ್‌ಕುಮಾರ್‌ ಸಂಪುಟದಿಂದ ಕೈಬಿಡಲು ಕನ್ನಡ ಸೇನೆ ಆಗ್ರಹ

editor tv by editor tv
February 5, 2023
in ರಾಜ್ಯ, ಸುದ್ದಿ
0
ತುಳು ಅಧಿಕೃತ ಭಾಷೆ ವಿಚಾರ: ಸಚಿವ ಸುನೀಲ್‌ಕುಮಾರ್‌ ಸಂಪುಟದಿಂದ ಕೈಬಿಡಲು ಕನ್ನಡ ಸೇನೆ ಆಗ್ರಹ
1.9k
VIEWS
Share on FacebookShare on TwitterShare on Whatsapp

,ಚಿಕ್ಕಮಗಳೂರು (ಫೆ.5) : ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಪರಿಗಣಿಸಲು ಒಲವು ವ್ಯಕ್ತಪಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ಕುಮಾರ್‌ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಕನ್ನಡ ಸೇನೆ ಆಗ್ರಹಿಸಿದೆ.

ಈ ಸಂಬಂಧ ಸೇನೆ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಶಿರಸ್ತೆದಾರ್‌ ಕೆ. ಚಂದ್ರಶೇಖರ್‌ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿ, ಬಳಿಕ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಪಿ.ಸಿ. ರಾಜೇಗೌಡ ಮಾತನಾಡಿ, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಪರಿಗಣಿಸಲು ಕನ್ನಡ-ಸಂಸ್ಕೃತಿ ಇಲಾಖೆ ಕೈಗೊಂಡಿರುವ ಕ್ರಮ ಕೈಬಿಡಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಟ್ವೀಟ್‌ ಹಾಗೂ ಮಾಧ್ಯಮದಲ್ಲಿ ರಾಜ್ಯ ಸರ್ಕಾರ ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಪರಿಗಣಿಸುವ ಕುರಿತು ಸಮಿತಿ ರಚಿಸಿದ್ದು, ಶೀಘ್ರ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದಿದ್ದಾರೆ. ತುಳು ಭಾಷೆ, ದಕ್ಷಿಣ ಕನ್ನಡ ಜಿಲ್ಲೆಯ ಬಹುಜನರು ಮಾತನಾಡುವ ಭಾಷೆಯಾಗಿದ್ದು, ಸುಮಾರು 17 ಲಕ್ಷಕ್ಕಿಂತಲೂ ಹೆಚ್ಚು ಜನ ತುಳು ಮಾತನಾಡುವವರಿದ್ದಾರೆ, ಆದ್ದರಿಂದ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಪರಿಗಣಿಸ ಬೇಕೆಂಬುದು ತುಳುವರ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ.

ತುಳು ಭಾಷೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನರು ಮಾತನಾಡುವ ಭಾಷೆಯಾಗಿದೆಯೆ ಹೊರತು ಇಡೀ ರಾಜ್ಯದಲ್ಲಿ ಮೊದಲನೇ ಅಥವಾ ಎರಡನೇ ಪ್ರಾಮುಖ್ಯತೆ ಹೊಂದಿರುವ ಭಾಷೆಯಲ್ಲ. ತುಳು ಭಾಷೆಗೆ ಯಾವುದೇ ಸ್ವಂತ ಲಿಪಿ, ಸಾಹಿತ್ಯವಾಗಲಿ ಇಲ್ಲ, ರಾಜ್ಯದ ಇತರೆ ಯಾವುದೇ ಜಿಲ್ಲೆಗಳಲ್ಲಿಯೂ ಸಹ ಬಹುಜನರು ಮಾತನಾಡುವ ಭಾಷೆ ಆಗಿರುವುದಿಲ್ಲ ಎಂದು ಹೇಳಿದರು.

ತುಳು ಮಾತನಾಡುವವರ ಸಂಖ್ಯೆ 17 ಲಕ್ಷಕ್ಕಿಂತಲೂ ಹೆಚ್ಚಿದೆ ಎನ್ನುವುದವನ್ನೆ ಆಧಾರವಾಗಿಟ್ಟುಕೊಂಡು, ಅಧಿಕೃತ ಭಾಷೆಯನ್ನಾಗಿ ಪರಿಗಣಿಸುವುದಾದರೆ, ರಾಜ್ಯದಲ್ಲಿರುವ ಉರ್ದು, ತಮಿಳು, ತೆಲುಗು, ಮರಾಠಿ ಹಾಗೂ ಮಲೆಯಾಳಂ ಮಾತನಾಡುವವರ ಸಂಖ್ಯೆ ತುಳು ಮಾತನಾಡುವವರ ಸಂಖ್ಯೆಗಿಂತಲೂ ಹೆಚ್ಚಿದೆ.ಈ ಮಾನದಂಡವನ್ನೇ ಇಟ್ಟುಕೊಳ್ಳುವುದಾದರೆ ಉಳಿದ ಭಾಷಿಗರನ್ನು ಸಹ ಪರಿಗಣಿಸಬೇಕಾಗುತ್ತದೆ ಎಂದರು.

ತುಳು ಭಾಗದ ಬೇಡಿಕೆ ಅಷ್ಟಕ್ಕೆ ನಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆ ಹೆಸರನ್ನು ತುಳುನಾಡು ಎಂದು ಬದಲಾಯಿಸುವ ಜತೆಗೆ ದಕ್ಷಿಣ ಕನ್ನಡ ಜಿಲ್ಲೆ ಹಲವು ಊರುಗಳ ಈಗಿನ ಹೆಸರನ್ನು ತುಳು ಭಾ ಷೆಗೆ ಬದಲಾಯಿಸಬೇಕೆಂಬ ಬೇಡಿಕೆ ಮುಂದೊಂದು ದಿನ ಉದ್ಬವವಾಗಬಹುದೆಂದು ಆಲೋಚಿಸದೆ ಈ ತೀರ್ಮಾನಕ್ಕೆ ಬಂದಿರುವುದು ಸರಿಯಲ್ಲ ಎಂದು ಹೇಳಿದರು.ಹಾಗಾಗಿ ಸರ್ಕಾರದ ನಿಲುವನ್ನು ಕೂಡಲೆ ಕೈ ಬಿಡಬೇಕು. ಕನ್ನಡವನ್ನು ಹೊರತುಪಡಿಸಿ ಇತರೆ ಯಾವುದೇ ಭಾಷೆಯನ್ನು ಸ್ಥಾನಮಾನದ ಅಧಿಕೃತ ಭಾಷೆ ಎಂದು ಪರಿಗಣಿಸುವುದು, ಕನ್ನಡದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡಿದಂತಾಗುತ್ತದೆ. ಇದನ್ನೆ ಮುಂದುವರೆಸಿದರೆ, ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ಕನ್ನಡ ಸೇನೆ ನಗರ ಆಟೋ ಸಂಘದ ಅಧ್ಯಕ್ಷ ಜಯಪ್ರಕಾಶ್‌, ಉಪಾಧ್ಯಕ್ಷ ಶಂಕರೇಗೌಡ, ಹರೀಶ್‌, ಮೂಡಿಗೆರೆ ಪ್ರಸನ್ನ, ಹರೀಶ್‌, ಮೂರ್ತಿ, ಮಂಜುನಾಥ್‌ ಉಪಸ್ಥಿತರಿದ್ದರು.

Previous Post

Jamia Violence case: ಜಾಮಿಯಾ ಹಿಂಸಾಚಾರ ಪ್ರಕರಣ: ಶಾರ್ಜೀಲ್ ಇಮಾಮ್, ಆಸಿಫ್ ತನ್ಹಾ ಜೈಲಿನಿಂದ ಬಿಡುಗಡೆ

Next Post

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Next Post
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.