Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಹಿಂದೂ ಕಾರ್ಯಕರ್ತರನ್ನ ಅಣಬೆಗೆ ಹೋಲಿಸಿದ ಪುತ್ತೂರು ಬಿಜೆಪಿ ಶಾಸಕರ ವಿರುದ್ಧ ಭುಗಿಲೆದ್ದ ಆಕ್ರೋಶ, ಮುತ್ತಿಗೆ

editor tv by editor tv
February 9, 2023
in ಕರಾವಳಿ, ಸುದ್ದಿ
0
ಹಿಂದೂ ಕಾರ್ಯಕರ್ತರನ್ನ ಅಣಬೆಗೆ ಹೋಲಿಸಿದ ಪುತ್ತೂರು ಬಿಜೆಪಿ ಶಾಸಕರ ವಿರುದ್ಧ ಭುಗಿಲೆದ್ದ ಆಕ್ರೋಶ, ಮುತ್ತಿಗೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಹಿಂದೂ ಕಾರ್ಯಕರ್ತರನ್ನ ಅಣಬೆಗೆ ಹೋಲಿಸಿದ ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು (Sanjeeva Matandoor) ಅವರು ಇದೀಗ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹಿಸಿ ಮಠಂದೂರಿಗೆ ಮುತ್ತಿಗೆ ಹಾಕಿದ ಪ್ರಸಂಗ ಇಂದು ನಡೆಯಿತು. ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಪುತ್ತೂರು ಕ್ಷೇತ್ರಕ್ಕೆ ಭೇಟಿ ಹಿನ್ನಲೆ ಪುತ್ತೂರಿನಲ್ಲಿ ಆಯೋಜಿಸಿದ್ದ ಪ್ರಚಾರ ಕಾಲ್ನಡಿಗೆ ಜಾಥದ ವೇಳೆ ಶಾಸಕರಿಗೆ ಘೇರಾವ್ ಹಾಕಿದ ಕಾರ್ಯಕರ್ತರು, ಕ್ಷಮೆ ಕೇಳುವಂತೆ ಪಟ್ಟು ಹಿಡಿದರು. ಕಾರ್ಯಕರ್ತರ ಆಕ್ರೋಶ ತಡೆಯಲಾಗದೇ ಸಂಜೀವ ಮಠಂದೂರು ಸ್ಥಳದಿಂದ ತೆರಳಿದರು.

ಮಂಗಳೂರಿನ ಪುತ್ತೂರಿನಲ್ಲಿ ಫೆಬ್ರವರಿ 11 ರಂದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ಅಮಿತ್ ಶಾ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಕರಾವಳಿ ಭಾಗದ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಕಾರ್ಯಕ್ರಮದ ನೆಪದಲ್ಲಿ ಮತಬೇಟೆ ನಡೆಸುವ ಯೋಜನೆ ಅವರದ್ದಾಗಿದೆ. ಇದರ ಭಾಗವಾಗಿ ಪುತ್ತೂರಿನ ದರ್ಬೆಯಿಂದ ಬೊಳುವಾರುವರೆಗೆ ಬಿಜೆಪಿ ಹಮ್ಮಿಕೊಂಡಿದ್ದ ಪ್ರಚಾರ ಜಾಥ ನಡೆಯಿತು. ಈ ವೇಳೆ ಶಾಸಕರಿಗೆ ಕಾರ್ಯಕರ್ತರು ಘೇರಾವ್ ಹಾಕಿದರು.

ಅಷ್ಟಕ್ಕೂ ಶಾಸಕರು ಕಾರ್ಯಕರ್ತರನ್ನು ಅಣಬೆಗೆ ಹೋಲಿಸಿದ್ದೇಕೆ?

ಹಿಂದೂ ಮುಖಂಡರೂ ಆಗಿರುವ ಪುತ್ತೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ಅರುಣ್ ಪುತ್ತಿಲ ಬೆಂಬಲಿಗರು ಪುತ್ತೂರಿಗೆ ಅಮಿತ್ ಶಾ ಭೇಟಿಗೆ ಶುಭಕೋರಿ ನಗರದಲ್ಲಿ ಕಟೌಟ, ಬ್ಯಾನರ್ ಅಳವಡಿಸಿದ್ದರು. ಆದರೆ ಈ ಬ್ಯಾನರ್​ನಲ್ಲಿ ಶಾಸಕ ಮಠಂದೂರ್ ಅವರ ಭಾವಚಿತ್ರ ಇರಲಿಲ್ಲ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಶಾಸಕರನ್ನು ಪತ್ರಕರ್ತರು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸುತ್ತಾ, ಬ್ಯಾನರ್ ಹಾಕಿದವರನ್ನ ಪರೋಕ್ಷವಾಗಿ ಅಣಬೆಗೆ ಹೋಲಿಸಿದ್ದರು.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶ ಇದೆ. ಚುನಾವಣೆ ಸಂದರ್ಭದಲ್ಲಿ ಇನ್ನೂ ಹೆಚ್ಚು ಅಲಂಕಾರಕ್ಕೆ ಮೆರಗು ಬರುತ್ತದೆ. ಹೊಸ ಹೊಸ ವ್ಯಕ್ತಿಗಳು ಹುಟ್ಟಿಕೊಳ್ಳುತ್ತಾರೆ, ಮಳೆ ಬಂದಾಗ ಅಣಬೆ ಹುಟ್ಟುತ್ತದೆ. ಅದು ಭಾರೀ ಸಮಯ ಬಾಳಿಕೆ ಬರುವುದಿಲ್ಲ. ಮಳೆ ಹೋದಾಗ ಅಣಬೆಯು ಹೋಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶಾಸಕರು ಅಣಬೆಗೆ ಹೋಲಿಸಿದ್ದು ಅರುಣ್ ಪುತ್ತಿಲ ಅವರನ್ನೇ ಎಂದು ಕಾರ್ಯಕರ್ತರು ಗರಂ ಆಗಿದ್ದು, ಸಾಮಾಜಿಕ ತಾಣಗಳಲ್ಲಿ ಮಠಂದೂರು ವಿರುದ್ದ ಟೀಕಿಸಿದ್ದರು. ಇದೀಗ ಜಾಥಾದಲ್ಲಿಯೇ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.

2018ರ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲ ಮತ್ತು ಮಠಂದೂರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಮಠಂದೂರು ಅವರಿಗೆ ಟಿಕೆಟ್ ಒಲಿದುಬಂದಿತ್ತು. ಅದಾಗ್ಯೂ,ಅರುಣ್ ಪುತ್ತಿಲ ಅವರು ಮಠಂದೂರು ಪರ ಪ್ರಚಾರ ನಡೆಸಿದ್ದರು. ಆದರೀಗ ಸಂಜೀವ ಮಠಂದೂರು ಬದಲಾವಣೆಗೆ ಒತ್ತಡ ಹೆಚ್ಚಾಗಿದ್ದು, ಟ್ವಿಟರ್, ಫೇಸ್ ಬುಕ್​ಗಳಲ್ಲಿ ಪುತ್ತೂರಿನ ಹಿಂದೂ ಮುಖಂಡ ಅರುಣ್ ಪುತ್ತಿಲ ಹೆಸರಿನಲ್ಲಿ ಕ್ಯಾಂಪೇನ್ ಆರಂಭವಾಗಿದೆ. ಆ ಮೂಲಕ ಪುತ್ತೂರಿನ ಹಾಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ವಿರುದ್ದವೇ ಹಿಂದೂ ಸಂಘಟನೆಗಳು ತೊಡೆ ತಟ್ಟಿ ನಿಂತಿವೆ. ಮುಂದೆ ಯಾವ ಬದಲಾವಣೆಯಾಗುತ್ತೋ ಕಾದುನೋಡಬೇಕಿದೆ.

Previous Post

ಹೆಗಲ ಮೇಲೆ ಹೆಂಡತಿಯ ಶವ ಹೊತ್ತು ಆಂಧ್ರದಿಂದ ಒಡಿಶಾಗೆ ನಡೆದ!

Next Post

ಕರಾವಳಿ ಪಿಚ್ ರಿಪೋರ್ಟ್ ಹೈಕಮಾಂಡ್‌ಗೆ , ಕರಾವಳಿ ಫೋಕಸ್ – ಏನಿದು ಶಾ ತಂತ್ರ?

Next Post
ಕರಾವಳಿ ಪಿಚ್ ರಿಪೋರ್ಟ್ ಹೈಕಮಾಂಡ್‌ಗೆ , ಕರಾವಳಿ ಫೋಕಸ್ – ಏನಿದು ಶಾ ತಂತ್ರ?

ಕರಾವಳಿ ಪಿಚ್ ರಿಪೋರ್ಟ್ ಹೈಕಮಾಂಡ್‌ಗೆ , ಕರಾವಳಿ ಫೋಕಸ್ – ಏನಿದು ಶಾ ತಂತ್ರ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.