Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

editor tv by editor tv
February 10, 2023
in ರಾಷ್ಟ್ರೀಯ, ಸುದ್ದಿ
0
ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ
1.9k
VIEWS
Share on FacebookShare on TwitterShare on Whatsapp

ಶ್ರೀನಗರ: ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) 59 ದಶಲಕ್ಷ ಟನ್ ಲಿಥಿಯಮ್ (Lithium) ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಲಿಥಿಯಮ್ ಹಗುರವಾದ ಲೋಹವಾಗಿದ್ದು, ಇದನ್ನು ಇ.ವಿ (ವಿದ್ಯುತ್ ಚಾಲಿತ ವಾಹನ) ಬ್ಯಾಟರಿಗಳ (EV batteries) ತಯಾರಿಕೆಗೆ ಬಳಸಲಾಗುತ್ತದೆ.

Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia

1/2 pic.twitter.com/tH5uv2BL9m

— Ministry of Mines (@MinesMinIndia) February 9, 2023

ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ (GSI) ನಡೆಸಿದ ಸಂಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ 59 ಲಕ್ಷ ಟನ್‌ಗಳಷ್ಟು ಲಿಥಿಯಮ್ ನಿಕ್ಷೇಪವಿರುವುದು ಕಂಡುಬಂದಿದೆ. ಲಿಥಿಯಮ್ ಹಾಗೂ ಚಿನ್ನ ಸೇರಿದಂತೆ 51 ಖನಿಜ ಬ್ಲಾಕ್‌ಗಳನ್ನ ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದು ಗಣಿ ಸಚಿವಾಲಯ (Ministry Of Mines) ಗುರುವಾರ ತಿಳಿಸಿದೆ.

ಪತ್ತೆಹಚ್ಚಲಾದ 51 ಖನಿಜ ಬ್ಲಾಕ್‌ಗಳಲ್ಲಿ 5 ಬ್ಲಾಕ್‌ಗಳು ಚಿನ್ನ (Gold), ಇತರ ಬ್ಲಾಕ್‌ಗಳು ಪೊಟ್ಯಾಶ್, ಮಾಲಿಬ್ಡಿನಮ್, ಮೂಲ ಲೋಹ ಸರಕುಗಳಿಗೆ ಸಂಬಂಧಿಸಿವೆ. ಇವು ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿ 11 ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ಸಚಿವಾಲಯ ಹೇಳಿದೆ.

ತಾಂತ್ರಿಕ ಕ್ಷೇತ್ರಕ್ಕೆ ನಿರ್ಣಾಯಕ ಖನಿಜ ಪೂರೈಕೆಯನ್ನು ಬಲಪಡಿಸಲು, ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾದಿಂದ ಲಿಥಿಯಮ್ ಸೇರಿದಂತೆ ಖನಿಜಗಳನ್ನು ಪಡೆಯಲು ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಗಣಿ ಸಚಿವಾಲಯ ಹೇಳಿತ್ತು. ಈ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆಯಾಗಿರುವುದು ಆಶಾದಾಯಕ ಬೆಳವಣಿಗೆ ಎನಿಸಿದೆ.

ಪ್ರಸ್ತುತ ಭಾರತವು ಲಿಥಿಯಮ್, ನಿಕ್ಕಲ್ ಮತ್ತು ಕೋಬಾಲ್ಟ್‌ನಂತಹ ಅನೇಕ ಖನಿಜಗಳನ್ನು ಆಮದು ಮಾಡಿಕೊಳ್ಳುತ್ತಿದೆ. 7,897 ದಶಲಕ್ಷ ಟನ್‌ನಷ್ಟಿರುವ ಕಲ್ಲಿದ್ದಲು ಮತ್ತು ಲಿಗ್ನೈಟ್‌ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ವರದಿಗಳನ್ನ ಕಲ್ಲಿದ್ದಲು ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದೆ.

ನವದೆಹಲಿಯಲ್ಲಿ ನಡೆದ 62ನೇ ಕೇಂದ್ರ ಭೂಗರ್ಭಶಾಸ್ತ್ರ ಪ್ರೋಗ್ರಾಮಿಂಗ್ ಬೋರ್ಡ್‌ನ ಸಭೆಯಲ್ಲಿ ಮಾತನಾಡಿದ ಗಣಿ ಸಚಿವಾಲಯದ ಕಾರ್ಯದರ್ಶಿ ವಿವೇಕ್ ಭಾರದ್ವಾಜ್, ಮೊಬೈಲ್ ಫೋನ್ ಆಗಿರಲಿ ಅಥವಾ ಸೋಲಾರ್ ಪ್ಯಾನಲ್ ಆಗಿರಲಿ ಎಲ್ಲದಕ್ಕೂ ಖನಿಜ ಬೇಕಾಗುತ್ತವೆ. ಸ್ವಾವಲಂಬಿಯಾಗಲು ದೇಶವು ನಿರ್ಣಾಯಕ ಖನಿಜಗಳನ್ನ ಕಂಡುಹಿಡಿಯುವುದು ಮತ್ತು ಅದನ್ನು ಸಂಸ್ಕರಿಸುವುದು ಬಹಳ ಮುಖ್ಯ. ಚಿನ್ನದ ಆಮದು ಕಡಿಮೆಯಾದರೆ ನಾವು ಸ್ವಾವಲಂಬಿ ಆಗುತ್ತೇವೆ ಎಂದು ತಿಳಿಸಿದ್ದಾರೆ.

Previous Post

BBC Documentary Row: ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Next Post

ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧೆ, ಶ್ರೀರಾಮ ಸೇನೆ ಸಂಘಟನೆಯೊಳಗೆ ಭುಗಿಲೆದ್ದ ಭಿನ್ನಮತ

Next Post
ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧೆ, ಶ್ರೀರಾಮ ಸೇನೆ ಸಂಘಟನೆಯೊಳಗೆ ಭುಗಿಲೆದ್ದ ಭಿನ್ನಮತ

ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧೆ, ಶ್ರೀರಾಮ ಸೇನೆ ಸಂಘಟನೆಯೊಳಗೆ ಭುಗಿಲೆದ್ದ ಭಿನ್ನಮತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.